ಕಾಂತಾರ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು', ಇದನ್ನು ಸಿನಿಮಾದಲ್ಲಿ ರಿಷಬ್ ಶೆಟ್ಟಿಗಿಂತ ಯಾರೂ ಚೆನ್ನಾಗಿ ಹೇಳಲು ಸಾಧ್ಯವಿಲ್ಲ: ರಜನಿಕಾಂತ್

ಅಪ್ಪಟ ಕನ್ನಡ ನೆಲ, ಸಂಸ್ಕೃತಿ, ಭಾಷೆಯ ಚಲನಚಿತ್ರ ಕಾಂತಾರ ಸಿನಿಮಾ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಕಥೆ ಬರೆದು ಸಿನಿಮಾ ತೆಗೆದಿರುವ ರೀತಿ, ಅವರ ನಟನೆಯನ್ನು ದಿಗ್ಗಜ ನಟರು ಹಾಡಿಹೊಗಳುತ್ತಿದ್ದಾರೆ.

ಚೆನ್ನೈ: ಅಪ್ಪಟ ಕನ್ನಡ ನೆಲ, ಸಂಸ್ಕೃತಿ, ಭಾಷೆಯ ಚಲನಚಿತ್ರ ಕಾಂತಾರ ಸಿನಿಮಾ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಕಥೆ ಬರೆದು ಸಿನಿಮಾ ತೆಗೆದಿರುವ ರೀತಿ, ಅವರ ನಟನೆಯನ್ನು ದಿಗ್ಗಜ ನಟರು ಹಾಡಿಹೊಗಳುತ್ತಿದ್ದಾರೆ.

ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಸಹ ದೀಪಾವಳಿ ಹಬ್ಬದ ಮಧ್ಯೆ ಚಿತ್ರ ವೀಕ್ಷಿಸಿ ರಿಷಬ್ ಶೆಟ್ಟಿಯನ್ನು ಮನಸಾರೆ ಹೊಗಳಿ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು ಎಂಬುದನ್ನು ಸಿನಿಮಾದಲ್ಲಿ ಇಷ್ಟು ಚೆನ್ನಾಗಿ ಇದುವರೆಗೆ ಯಾರೂ ತೋರಿಸಿರಲಾರರು, ಹೇಳಿರಲಾರರು, ಹೊಂಬಾಳೆ ಫಿಲ್ಮ್ಸ್ ನಡಿ ಮೂಡಿಬಂದ ಕಾಂತಾರ ಚಿತ್ರ ನೋಡಿ ನನ್ನ ಮೈನವಿರೇಳಿತು.

ಬರಹಗಾರನಾಗಿ, ನಿರ್ದೇಶಕನಾಗಿ ಮತ್ತು ನಟನಾಗಿ ರಿಷಬ್ ಶೆಟ್ಟಿಯವರೇ ನಿಮಗೆ ಹ್ಯಾಟ್ಸ್ ಆಫ್. ಭಾರತೀಯ ಚಿತ್ರರಂಗದ ಮೇರುಚಿತ್ರವಾಗಿರುವ ಇದರ ಭಾಗವಾಗಿರುವ ಎಲ್ಲಾ ನಟರು ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT