ರಜನಿಕಾಂತ್ - ಪುನೀತ್ 
ಸಿನಿಮಾ ಸುದ್ದಿ

ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ ಕಾರ್ಯಕ್ರಮದಲ್ಲಿ ಅಮಿತಾಭ್, ರಜನಿಕಾಂತ್, ದೀಪಿಕಾ ಭಾಗಿ ಸಾಧ್ಯತೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,  ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ...

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,  ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಹಾಗೂ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರದಾನ ಮಾಡುವ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರಿಗೆ ರಾಜ್ಯ ಸರ್ಕಾರವೇ ಆಹ್ವಾನಿಸುತ್ತಿದೆ. ಕನ್ನಡ ಚಿತ್ರರಂಗದ ದಿಗ್ಗಜರ ಜೊತೆಗೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂ.ಎನ್ ಟಿಆರ್ ಗೂ, ಅಮಿತಾಭ್ ಬಚ್ಚನ್, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಐಶ್ವರ್ಯಾ ರೈ ಬಚ್ಚನ್ ಅವರಿಗೂ ವಿಶೇಷ ಆಹ್ವಾನ ನೀಡಲಾಗಿದೆ.

ಡಾ.ರಾಜ್ ಕುಮಾರ್ ಅವರಿಗೂ ಸಹ ಕರ್ನಾಟಕ ರತ್ನ ನೀಡಲಾಗಿತ್ತು. ಈಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಕನ್ನಡ ಸಿನಿಮಾ ರಂಗದ ಸೇವೆಗಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ತಂದೆ-ಮಗ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

ಈವರೆಗೆ ಎಂಟು ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. 2009ರ ನಂತರ ಈಗ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ!

SCROLL FOR NEXT