ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.
ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ದೊಡ್ಡ ಪರದೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಕನ್ನಡಿಗರಿಗೆ, ಪುನೀತ್ ಅಭಿಮಾನಿಗಳಿಗೆ ಇದೊಂದು ರೀತಿಯಲ್ಲಿ ಹಬ್ಬ.
ಕಳೆದ ವರ್ಷ ಅಕ್ಟೋಬರ್ 29ರಂದು ಪುನೀತ್ ರಾಜ್ ಕುಮಾರ್ ಹಠಾತ್ ಆಗಿ ಹೃದಯಾಘಾತದಿಂದ ನಿಧನ ಹೊಂದಿದ ನಂತರ ಅವರ ಪತ್ನಿ ಅಶ್ವಿನಿಯವರು ಸಾರ್ವಜನಿಕವಾಗಿ ಎಲ್ಲಿಯೂ ಮಾತನಾಡಿರಲಿಲ್ಲ. ಯಾವ ಪ್ರತಿಕ್ರಿಯೆಯನ್ನೂ ನೀಡಿರಲಿಲ್ಲ.
ಇದನ್ನೂ ಓದಿ: ಪುನೀತ್ ಅವರನ್ನು ಸರಳ ವ್ಯಕ್ತಿ ಎಂದ ಅಮೋಘವರ್ಷ; ಗಂಧದಗುಡಿಯಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕೂಡ ಇದ್ದಾರೆ!
ಇದೀಗ ಗಂಧದ ಗುಡಿ ಚಿತ್ರದ ಬಿಡುಗಡೆ ಸಮಯದಲ್ಲಿ ಚಿತ್ರದ ತೆರೆಯ ಹಿಂದಿನ ಪಯಣವನ್ನು ನಿರ್ದೇಶಕ ಸಂತೋಷ್ ಆನಂದ್ರಾಮ್ ಅವರೊಂದಿಗೆ ಸಂದರ್ಶನದಲ್ಲಿ ವಿವರಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಜೊತೆಗೆ ಅಶ್ವಿನಿಯವರು ಕೂಡ ಕಾಣಿಸಿಕೊಂಡಿದ್ದಾರೆ.