ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್

ದಿವಂಗತ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ಬೆಂಗಳೂರು: ದಿವಂಗತ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದ ವ್ಯಕ್ತಿ. ಕೇವಲ ನಟನೆ ಮಾತ್ರವಲ್ಲದೆ ನಿರ್ಮಾಣದಲ್ಲೂ ಬ್ಯುಸಿ ಇದ್ದರು. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಟ್ವೀಟ್ ಮಾಡಿದ್ದರು. ಇದರಲ್ಲಿ ನವೆಂಬರ್ 1ರಂದು ವಿಶೇಷ ಘೋಷಣೆ ಮಾಡುವ ವಿಚಾರ ತಿಳಿಸಿದ್ದರು. ಈ ಟ್ವೀಟ್ ಮಾಡಿದ ಎರಡೇ ದಿನಕ್ಕೆ ಪುನೀತ್  ಹೃದಯಾಘಾತದಿಂದ ನಿಧನ ಹೊಂದಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT