ಕಾಂತಾರ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಕಾಂತಾರ'ಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ಹಾಡು ಪ್ರಸಾರ ಮಾಡದಂತೆ ಕೇರಳ ಸೆಷನ್ಸ್ ಕೋರ್ಟ್ ಆದೇಶ

ಕರಾವಳಿಯ ಭೂತ-ದೈವಕೋಲದ ಕಥೆಯನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ತಯಾರಾದ ಕಾಂತಾರ ಚಿತ್ರ ಯಶಸ್ವಿಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗ ಬಿಡುಗಡೆಯಾಗಿ ಬೇರೆ ಭಾಷೆಗಳಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. 

ತಿರುವನಂತಪುರ: ಕರಾವಳಿಯ ಭೂತ-ದೈವಕೋಲದ ಕಥೆಯನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ತಯಾರಾದ ಕಾಂತಾರ ಚಿತ್ರ(Kantara film) ಯಶಸ್ವಿಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗ ಬಿಡುಗಡೆಯಾಗಿ ಬೇರೆ ಭಾಷೆಗಳಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. 

ಈ ಮಧ್ಯೆ ಕಾಂತಾರ ಚಿತ್ರದ ಜನಪ್ರಿಯ ಗೀತೆ ವರಾಹ ರೂಪಂ (Varaha Roopam) ಹಾಡಿನ ಸಂಗೀತ ಸ್ವಂತದ್ದಲ್ಲ, ಮಲಯಾಳಂನ ನವರಸಂ ಹಾಡಿನ ನಕಲು ಎಂಬ ಆರೋಪ ಚಿತ್ರ ಯಶಸ್ಸು ಕಾಣುತ್ತಿದ್ದಂತೆ ಕೇಳಿಬಂತು. ಅಷ್ಟಕ್ಕೇ ನಿಲ್ಲದೆ ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಗೀತೆ ಮೂಲಕ ಕಾಪಿರೈಟ್ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಮೂಲ ಹಾಡು ತಯಾರಿಸಿದ ಕೇರಳದ ತೈಕ್ಕುಡಂ ಬ್ರಿಡ್ಜ್​ ಎಂಬ ಸಂಗೀತ ಕಂಪನಿ ಕೋರ್ಟ್ ಮೊರೆ ಹೋಗಿತ್ತು. 

ಇದೀಗ ಯಶಸ್ಸು, ಜನಪ್ರಿಯತೆ ನಡುವೆ ಕಾಂತಾರ ಚಿತ್ರಕ್ಕೆ ಕಾನೂನು ಸಂಕಟ ಎದುರಾಗಿದೆ. ತೈಕ್ಕುಡಂ ಬ್ರಿಡ್ಜ್(Thaikkudam Bridge) ದೂರು ಹಿನ್ನೆಲೆ ಕೇರಳದ ಸೆಷನ್ಸ್ ಕೋರ್ಟ್​ ವರಾಹರೂಪಂ ಹಾಡು ಪ್ರಸಾರಕ್ಕೆ ತಡೆ ನೀಡಿದ್ದು, ಪ್ರಸಾರ ಮಾಡಬೇಕಾದರೆ ತೈಕ್ಕುಡಂ ಬ್ರಿಡ್ಜ್ ಅನುಮತಿ ಬೇಕು ಎಂದು ಹೇಳಿದೆ. ಇದನ್ನು ಸ್ವತಃ ತೈಕ್ಕುಡಂ ಬ್ರಿಡ್ಜ್ ಸಂಸ್ಥೆ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದೆ.

ಕೋಝಿಕ್ಕೋಡ್ ನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ಅಮೆಜಾನ್, ಯೂಟ್ಯೂಬ್, ಸ್ಪೂಟಿಫೈ, ವೈಂಕ್ ಮ್ಯೂಸಿಕ್, ಜಿಯೊಸವನ್ ಮತ್ತು ಇತರ ಆನ್ ಲೈನ್ ಮಾಧ್ಯಮಗಳಿಗೆ ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ತೈಕ್ಕುಡಂ ಬ್ರಿಡ್ಜ್ ಅನುಮತಿಯಿಲ್ಲದೆ ಪ್ರಸಾರ ಮಾಡಬಾರದು ಎಂದು ಆದೇಶ ನೀಡಿದ್ದಾರೆ. 

ವರಾಹರೂಪಂ ಹಾಡಿನ ಸಂಗೀತ ಮೂಲ ಅಲ್ಲ, ಮಲಯಾಳಂ ಹಾಡಿನ ನಕಲು ಎಂದು ಸುಪ್ರೀಂ ಕೋರ್ಟ್​ ವಕೀಲ ಸತೀಶ್ ಮೂರ್ತಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್​ ಎಲ್ಲಿಯೂ ಹಾಡು ಪ್ರಸಾರ ಮಾಡದಂತೆ ತಡೆ ನೀಡಿದೆ. ಯೂಟ್ಯೂಬ್, ಸ್ಪೊಟಿಪೈ ಸೇರಿ ಹಲವೆಡೆ ಪ್ರಸಾರ ಮಾಡದಂತೆ ತಡೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT