ಬ್ಯಾಚುಲರ್ ಪಾರ್ 
ಸಿನಿಮಾ ಸುದ್ದಿ

ಅಭಿಜಿತ್ ಮಹೇಶ್ ಚೊಚ್ಚಲ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ'ಗೆ ರಕ್ಷಿತ್ ಶೆಟ್ಟಿ ಪ್ರೊಡ್ಯೂಸರ್

ರಕ್ಷಿತ್  ಶೆಟ್ಟಿ ಒಡೆತನದ ಪರಮಾವ್ ಸ್ಟುಡಿಯೋ ಪರಮಾವ್ ಸ್ಟುಡಿಯೋ ಹೊಸ ಸಿನಿಮಾ ಘೋಷಣೆ ಮಾಡಿದೆ. ಅಭಿಷೇಕ್ ಮಹೇಶ್ ನಿರ್ದೇಶನದ ಚಿತ್ರಕ್ಕೆ ‘ಬ್ಯಾಚುಲರ್ ಪಾರ್ಟಿ’ ಎಂದು ಹೆಸರಿಡಲಾಗಿದೆ.

ರಕ್ಷಿತ್  ಶೆಟ್ಟಿ ಒಡೆತನದ ಪರಮಾವ್ ಸ್ಟುಡಿಯೋ ಪರಮಾವ್ ಸ್ಟುಡಿಯೋ ಹೊಸ ಸಿನಿಮಾ ಘೋಷಣೆ ಮಾಡಿದೆ. ಅಭಿಷೇಕ್ ಮಹೇಶ್ ನಿರ್ದೇಶನದ ಚಿತ್ರಕ್ಕೆ ‘ಬ್ಯಾಚುಲರ್ ಪಾರ್ಟಿ’ ಎಂದು ಹೆಸರಿಡಲಾಗಿದೆ.

ಜಿ.ಎಸ್.ಗುಪ್ತಾ ಮತ್ತು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ರಿಷಭ್ ಶೆಟ್ಟಿ, ದಿಗಂತ್ ಮಂಚಾಲೆ, ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಿರಿ ರವಿಕುಮಾರ್, ಅರ್ಚರಾ ಕಿರ್ಕ್, ಪ್ರಕಾಶ್ ತುಮಿನಾಡು ಮುಂತಾದವರು ತಾರಾಗಣದಲ್ಲಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಸೆವೆನ್ ಆಡ್ಸ್ ತಂಡದಲ್ಲಿದ್ದ ಈ ಹಿಂದೆ ಕಿರಿಕ್ ಪಾರ್ಟಿ, ಅವನೇ ಶ್ರೀಮನ್ನಾರಾಯಣ, ಸ.ಹಿ.ಪ್ರಾ.ಶಾ. ಕಾಸರಗೋಡು ಚಿತ್ರಗಳ ಕಥೆ- ಚಿತ್ರಕಥೆಯಲ್ಲಿ ಕೆಲಸ ಮಾಡಿದ್ದ ಅಭಿಜಿತ್ ಮಹೇಶ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಬ್ಯಾಚುಲರ್ ಪಾರ್ಟಿ ಚಿತ್ರದ ಕಥೆ- ಚಿತ್ರಕಥೆ ಅಭಿಜಿತ್ ಮಹೇಶ್ ಅವರದ್ದೇ. ಚಿತ್ರಕ್ಕೆ ಅರ್ಜುನ್ ರಾಮು ಸಂಗೀತವಿದ್ದು, ಅರವಿಂದ ಎಸ್ ಕಶ್ಯಪ್ ಛಾಯಾಗ್ರಹಣವಿದೆ.

ನಾನು ಕಿರುಚಿತ್ರ ನಿರ್ದೇಶಕನಾಗಿ ಕೆಲಸ ಆರಂಭಿಸಿದಾಗಿನಿಂದ ರಕ್ಷಿತ್ ಶೆಟ್ಟಿಯೊಂದಿಗೆ ನನ್ನ ಪ್ರಯಾಣ ಪ್ರಾರಂಭವಾಯಿತು. ಕಿರಿಕ್ ಪಾರ್ಟಿ ನಂತರ ನಾವು ಪೂರ್ಣ ಪ್ರಮಾಣದ ಕಾಮಿಡಿ ಎಂಟರ್‌ಟೈನರ್ ಮಾಡಿಲ್ಲ. ಬ್ಯಾಚುಲರ್ ಪಾರ್ಟಿ ಶೀರ್ಷಿಕೆಯಂತೆ ಸಿನಿಮಾ ಕಥೆ ಕೂಡ ಪ್ರೆಶ್ ಆಗಿದೆ, ಅದರಂತೆ ಕಥೆ ಕೂಡ ಹೊಸದಾಗಿದೆ ಎಂದು ನಿರ್ದೇಶಕ ಅಭಿಜಿತ್ ತಿಳಿಸಿದ್ದಾರೆ.

ರಕ್ಷಿತ್ ಮತ್ತು ರಿಷಬ್  ಅವರೊಂದಿಗೆ ಬೆರೆಯುವುದು ಯಾವಾಗಲೂ ಖುಷಿಯಾಗುತ್ತದೆ. ಆದರೆ ದಿಗಂತ್ ಜೊತೆ ಇದೇ ಮೊದಲು ಕೆಲಸ ಮಾಡುತ್ತಿದ್ದೇನೆ, ಅವರು ಕೂಡ ನಮ್ಮ ಜೊತೆ ಸಲೀಸಾಗಿ ಹೊಂದಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಮದುವೆ ಮತ್ತು ಪ್ರೇಮ ಜೀವನವನ್ನು ವಿಡಂಬನಾತ್ಮಕವಾಗಿ ಚಿತ್ರಿಸಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT