ಕರಟಕ-ದಮನಕ ಸೆಟ್ 
ಸಿನಿಮಾ ಸುದ್ದಿ

ಯೋಗರಾಜ್ ಭಟ್ಟರ ಮುಂದಿನ ಸಿನಿಮಾ ಟೈಟಲ್ ಫಿಕ್ಸ್: 'ಕರಟಕ-ದಮನಕ' ಶೀರ್ಷಿಕೆ ರಿವೀಲ್!

ಯೋಗರಾಜ್‌ ಭಟ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್ ಅವರಿಗೆ ಡೈರೆಕ್ಟ್‌ ಮಾಡುತ್ತಿರುವ ವಿಷಯ ಕೆಲ ದಿನಗಳ ಹಿಂದೆ ರಿವೀಲ್‌ ಆಗಿತ್ತು. ಈಗ ಚಿತ್ರ ತಂಡದಿಂದ ಮತ್ತೊಂದು ಅಪ್‌ ಡೇಟ್‌ ಹೊರ ಬಿದ್ದಿದೆ.

ಯೋಗರಾಜ್‌ ಭಟ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್ ಅವರಿಗೆ ಡೈರೆಕ್ಟ್‌ ಮಾಡುತ್ತಿರುವ ವಿಷಯ ಕೆಲ ದಿನಗಳ ಹಿಂದೆ ರಿವೀಲ್‌ ಆಗಿತ್ತು. ಈಗ ಚಿತ್ರ ತಂಡದಿಂದ ಮತ್ತೊಂದು ಅಪ್‌ ಡೇಟ್‌ ಹೊರ ಬಿದ್ದಿದೆ.

ಚಿತ್ರೀಕರಣ ಆರಂಭಿಸಿದ್ದ ಯೋಗರಾಜ್‌ ಭಟ್‌ ಚಿತ್ರದ ಟೈಟಲ್‌ ಫಿಕ್ಸ್‌ ಮಾಡಿರಲಿಲ್ಲ. ಈಗ ಚಿತ್ರದ ಟೈಟಲ್‌ ರಿವೀಲ್‌ ಮಾಡಿದ್ದು, ‘ಕರಟಕ ದಮನಕ’ ಎಂದು ಭಿನ್ನವಾದ ಶೀರ್ಷಿಕೆಯನ್ನಿಟ್ಟು ಪ್ರೇಕ್ಷಕರ ತಲೆಗೆ ಕುತೂಹಲದ ಹುಳು ಬಿಟ್ಟಿದ್ದಾರೆ ಯೋಗರಾಜ್‌ ಭಟ್.

ರಾಕ್‌ ಲೈನ್‌ ಪ್ರೂಡಕ್ಷನ್ಸ್‌ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಯೋಗರಾಜ್ ಭಟ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಒಂದು ಪೋಸ್ಟ್ ಶೇರ್ ಮಾಡಿದ್ದಾರೆ. ಅದರಲ್ಲಿ ನಾಲ್ಕವರ ಹೆಸರಿದೆ. ಮೇಲೆ ಶ್ರೀ ಶಿವಣ್ಣ+ ಶ್ರೀ ಪ್ರಭುದೇವ ಅಂತಿದೆ. ಅದೇ ಕೆಳಗೆ ಶ್ರೀ ರಾಕ್‌ಲೈನ್ ವೆಂಕಟೇಶ್ + ಶ್ರೀ ಯೋಗರಾಜ್ ಭಟ್ ಅಂತಿದೆ. ಮಧ್ಯೆ K ಮುಂದೆ ಕರಟಕ D ಮುಂದೆ ದಮನಕ ಅಂತಲೂ ಇದೆ. ಇದೇ ಮುಂದಿನ ಸಿನಿಮಾ ಅಂತ ಬರೆದುಕೊಂಡಿದ್ದಾರೆ.

ಕರಟಕ' ಹಾಗೂ 'ದಮನಕ' ಅನ್ನೋ ಎರಡು ಪದಗಳನ್ನು ಡಿಕೋಡ್ ಮಾಡಲು ಹೋದರೆ, ಪಂಚತಂತ್ರದ ಕಡೆ ಹೋಗುತ್ತೆ. ಪಂಚತಂತ್ರದ ಕಥೆಯಲ್ಲಿ ಕರಟಕ ಹಾಗೂ ದಮನಕ ಎಂಬುದು ಎರಡು ನರಿಗಳು. ಇವು ಕಾಡಿನ ರಾಜ ಸಿಂಹದ ಮಂತ್ರಿಗಳು. ಎರಡೂ ಬೇರೆ ಸ್ವಭಾವ ಹೊಂದಿದ್ದು, ಸಿಂಹರಾಜನ ಕಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಪ್ರಭುದೇವ ಹಾಗೂ ಶಿವರಾಜ್‌ಕುಮಾರ್ ಇಬ್ಬರೂ ಈಗಾಗಲೇ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ಆರಂಭ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಭುದೇವ ಹಾಗೂ ಶಿವರಾಜ್‌ಕುಮಾರ್ ಇಬ್ಬರೂ ಜೋಷ್‌ನಲ್ಲೇ ಭಾಗಿಯಾಗಿದ್ದಾರೆ.

ಬಹಳ ದಿನಗಳ ಬಳಿಕ ರಾಕ್‌ಲೈನ್ ವೆಂಕಟೇಶ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ರಾಕ್‌ಲೈನ್ ಕಾಣಿಸಿಕೊಳ್ಳುತ್ತಿದ್ದು, ನಾಲ್ವರು ದಿಗ್ಗಜರು ಒಂದೇ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ.

ಶಿವಣ್ಣ ಹಾಗೂ ಪ್ರಭುದೇವ ಇಬ್ಬರಿಗೂ ಒಬ್ಬೊಬ್ಬರು ನಾಯಕಿಯರು. 'ಜೇಮ್ಸ್' ಸಿನಿಮಾದಲ್ಲಿ ನಟಿಸಿರೋ ಪ್ರಿಯಾ ಆನಂದ್ ಮತ್ತು ನಿಶ್ವಿಕಾ ನಾಯ್ಡು ಈ ಸಿನಿಮಾದಲ್ಲಿದ್ದಾರೆ. ವಿ ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಈ ಸಿನಿಮಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT