ಕೇಸ್ ಆಫ್ ಕೊಂಡನಾ ಟೀಮ್ 
ಸಿನಿಮಾ ಸುದ್ದಿ

'ಕೇಸ್ ಆಫ್ ಕೊಂಡನಾ' ಚಿತ್ರಕ್ಕಾಗಿ ಮತ್ತೆ ಒಂದಾದ ದೇವಿಪ್ರಸಾದ್ ಶೆಟ್ಟಿ ಮತ್ತು ವಿಜಯ್ ರಾಘವೇಂದ್ರ!

ವಿಜಯ್ ರಾಘವೇಂದ್ರ ನಟನೆಯ 50ಸಿನಿಮಾ ಸೀತಾರಾಮ್ ಬೆನೊಯ್ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ.

ವಿಜಯ್ ರಾಘವೇಂದ್ರ ನಟನೆಯ 50ಸಿನಿಮಾ ಸೀತಾರಾಮ್ ಬೆನೊಯ್ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ.

ಕ್ರೈಮ್ ಸಿನಿಮಾಗಳ ಬಗ್ಗೆ ಹೆಚ್ಚು ಒಲವು ಹೊಂದಿರುವ ಬರಹಗಾರ ಮತ್ತು ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಕೇಸ್ ಆಫ್ ಕೊಂಡನಾ ಎಂಬ ಮತ್ತೊಂದು ತನಿಖಾ ಥ್ರಿಲ್ಲರ್‌ನೊಂದಿಗೆ ಮರಳಿದ್ದಾರೆ. ಚಿತ್ರವು 09/2018 ಎಂಬ  ಟ್ಯಾಗ್ ಲೈನ್ ಇದೆ. ಕೇಸ್ ಆಫ್ ಕೊಂಡನಾ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ, ಭಾವನಾ ಮೆನನ್ ಕೂಡ ತೆರೆ ಹಂಚಿಕೊಂಡಿದ್ದಾರೆ.

ಭಾವನಾ ಮೆನನ್ ಕೂಡ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ವೈದ್ಯೆಯ ಪಾತ್ರಗಲ್ಲಿ ನಟಿಸುತ್ತಿದ್ದಾರೆ, ಉಳಿದ ಕಲಾವಿದರನ್ನು ಅಂತಿಮ ಗೊಳಿಸುವ ಪ್ರಕ್ರಿಯೆಯಲ್ಲಿ ಚಿತ್ರ ತಂಡ  ಬ್ಯುಸಿಯಾಗಿದೆ.

ವಿಜಯ್ ರಾಘವೇಂದ್ರ ಒಬ್ಬ ಅತ್ಯದ್ಭುತ ನಟ, ಅವರು ನನ್ನ ಮೊದಲ ಚಿತ್ರಕ್ಕೆ ತುಂಬಾ ಬೆಂಬಲ ನೀಡಿದರು, ನನ್ನ ಅವರ ಎರಡನೇ ಕಾಂಬಿನೇಷನ್ ಸಿನಿಮಾ ಇದಾಗಿದೆ, ಈ ಸಿನಿಮಾದಲ್ಲಿ ಹಲವು ತಿರುವುಗಳ ಜೊತೆಗೆ ಸಾಕಷ್ಟು ಥ್ರಿಲ್ಲರ್ ಇದೆ ಎಂದು ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ವಿವರಿಸಿದ್ದಾರೆ.

ಸಾತ್ವಿಕ್ ಹೆಬ್ಬಾರ್ ಮತ್ತು ಅರವಿಂದ್ ಶೆಟ್ಟಿ ಜೊತೆಗೆ ದೇವಿಪ್ರಸಾದ್ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಕೇಸ್ ಆಫ್ ಕೊಂಡಾಣದ ಸಂಯೋಜಕರಾಗಿ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಹಣ,   ವಿಶ್ವಜಿತ್ ರಾವ್  ಛಾಯಾಗ್ರಹಣ ಮತ್ತು   ಭವಾನಿ ಶಂಕರ್ ಕಲಾ ನಿರ್ದೇಶನವಿದೆ.  ಜಯಂತ್ ಕಾಯ್ಕಿಣಿ ಸಾಹಿತ್ಯವಿರುವ ಈ ಚಿತ್ರಕ್ಕೆ ಜೋಗಿ ಸಂಭಾಷಣೆ ಬರೆಯುತ್ತಿದ್ದಾರೆ.

ಚಿತ್ರದ ಅಧಿಕೃತ ಲಾಂಚ್ ಸೆಪ್ಟೆಂಬರ್ 8 ರಂದು ನಡೆಯಲಿದೆ, ಸೆಪ್ಟೆಂಬರ್ 28 ರಿಂದ ಶೂಟಿಂಗ್ ಆರಂಭವಾಗಲಿದೆ. ಸಂಪೂರ್ಣ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆಸಲು ಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT