ಹೊಯ್ಸಳ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಡಾಲಿ ಧನಂಜಯ ನಟನೆಯ 25 ನೇ ಸಿನಿಮಾ 'ಹೊಯ್ಸಳ' ರಿಲೀಸ್ ಡೇಟ್ ಫಿಕ್ಸ್!

ಡಾಲಿ ಧನಂಜಯ್ ನಟನೆಯ ಹೊಯ್ಸಳ ಸಿನಿಮಾಗೆ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಡಾಲಿ ಧನಂಜಯ್ ನಟನೆಯ ಹೊಯ್ಸಳ ಸಿನಿಮಾಗೆ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಈಗಾಗಲೇ ರಿಲೀಸ್ ಆಗಿರುವ ಫಸ್ಟ್ ಲುಕ್ ಕೂಡ ಕುತೂಹಲ ಮೂಡಿಸಿತ್ತು. ಹಾಗಾಗಿ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ನಿರೀಕ್ಷೆ ಕೂಡ ಹೆಚ್ಚಾಗಿತ್ತು. ಧನಂಜಯ್‌ ನಟನೆಯ 25ನೇ ಸಿನಿಮಾ ‘ಹೊಯ್ಸಳ’ದ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಇದೇ ಸಂದರ್ಭದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನೂ ಘೋಷಿಸಿದೆ. 2023ರ ಮಾರ್ಚ್‌ 30ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಕೆಆರ್‌ಜಿ ಸ್ಟೂಡಿಯೋಸ್‌ ಬುಧವಾರ ತಿಳಿಸಿದೆ.

ಧನಂಜಯ್‌, ಈ ಚಿತ್ರದಲ್ಲಿ ‘ಗುರುದೇವ ಹೊಯ್ಸಳ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ನಡೆದಿರುವ ಘಟನೆಯನ್ನು ಆಧರಿಸಿ ಹೆಣೆದಿರುವ ಕಥೆ ಇದಾಗಿದ್ದು, ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದೆ.

‘ಮಾನ್ಸೂನ್‌ ರಾಗ’, ‘ತೋತಾಪುರಿ’, ‘ಹೆಡ್‌ಬುಷ್‌’ ಹೀಗೆ ಸಾಲು ಸಾಲು ಚಿತ್ರಗಳ ಬಿಡುಗಡೆಗೆ ಎದುರುನೋಡುತ್ತಿರುವ ನಟ ‘ಡಾಲಿ’ ಧನಂಜಯ್‌, ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಅತಿ ಹೆಚ್ಚು ಸಿನಿಮಾ ಬ್ಯಾಂಕ್‌ ಹೊಂದಿರುವ ನಟರಲ್ಲಿ ಮುಂಚೂಣಿಯಲ್ಲಿದ್ದಾರೆ.  ಕೆಆರ್‌ ಜಿ ಸ್ಟುಡಿಯೋಸ್‌ ಮೂಲಕ ಕಾರ್ತಿಕ್‌ – ಯೋಗಿ ಜಿ ರಾಜ್‌ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ನ ವಿಜಯ್‌ ಕಿರಗಂದೂರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

ಚಿತ್ರಕ್ಕೆ ವಿಜಯ್ ನಾಗೇಂದ್ರ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ ‘ಗೀತಾ’ ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT