ಶರ್ಮಿಳಾ ಮಾಂಡ್ರೆ 
ಸಿನಿಮಾ ಸುದ್ದಿ

ಬಾಲಾಜಿ ಮೋಹನ್ ಹೊಸ ಸಿನಿಮಾಗೆ ಶರ್ಮಿಳಾ ಮಾಂಡ್ರೆ ನಿರ್ಮಾಪಕಿ

ಬಾಲಾಜಿ ಮೋಹನ್ ಅವರ ಮುಂಬರುವ ಚಿತ್ರ ಕಾದಲ್ ಕೊಂಜಮ್ ತೂಕಲಾ' ದಲ್ಲಿ ಅಮಲಾ ಪೌಲ್, ಕಾಳಿದಾಸ್ ಜಯರಾಮ್, ದುಶಾರ ವಿಜಯನ್, ನಟಿಸುತ್ತಿದ್ದು ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಿದೆ. 

ಬಾಲಾಜಿ ಮೋಹನ್ ಅವರ ಮುಂಬರುವ ಚಿತ್ರ ಕಾದಲ್ ಕೊಂಜಮ್ ತೂಕಲಾ' ದಲ್ಲಿ ಅಮಲಾ ಪೌಲ್, ಕಾಳಿದಾಸ್ ಜಯರಾಮ್, ದುಶಾರ ವಿಜಯನ್, ನಟಿಸುತ್ತಿದ್ದು ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಿದೆ. 

ಈ ಸಿನಿಮಾ ಶಾರದಾ ಸುಬ್ರಹ್ಮಣಿಯನ್ ಅವರ ಮೇಕ್ ಇಟ್ 2 ಕಾದಂಬರಿಯ ಆಧಾರಿತ ಸಿನಿಮಾ ಆಗಿದ್ದು, ಲಂಡನ್ ನ ಸುತ್ತ ಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಯಲಿದೆ.

ದಸರಾ ಎಂಬ ಕನ್ನಡ ಸಿನಿಮಾ ಮೂಲಕ ನಿರ್ಮಾಪಕಿಯಾಗಿರುವ ಶರ್ಮಿಳಾ ಮಾಂಡ್ರೆ, ಚಿತ್ರ ತಂಡ 30 ದಿನಗಳ ಕಾಲ ವಿದೇಶದಲ್ಲಿ ಚಿತ್ರೀಕರಣ ನಡೆಸಲಿದೆ ಎಂದು ತಿಳಿಸಿದ್ದಾರೆ.

ಅಮಲಾ ಪೌಲ್

ತಾವು ಕಾದಲ್ ಕೊಂಜಮ್ ತೂಕಲಾ ಚಿತ್ರದ ನಿರ್ಮಾಪಕಿ ಮಾತ್ರ ಆಗಿದ್ದು, ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ನಿರ್ಮಾಣ ಮಾಡುವ ಚಿತ್ರಗಳಲ್ಲಿ ನಟಿಸಲೇಬೇಕಾದ ಅಗತ್ಯವಿಲ್ಲ. ಎರಡರ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ ಎಂದು ಅರ್ಥವಾಗಿದೆ. ಆದ್ದರಿಂದ ಈ ತಮಿಳು ಚಿತ್ರದಲ್ಲಿ ನಾನು ನಿರ್ಮಾಪಕಿಯಾಗಿರುವುದಷ್ಟೇ ಸೂಕ್ತ ಎಂದು ನಿರ್ಧರಿಸಿದ್ದೇನೆ ಎಂದು ಶರ್ಮಿಳಾ ಮಾಂಡ್ರೆ ತಿಳಿಸಿದ್ದಾರೆ.

ದಸರಾ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ವರ್ಷ ಬಿಡುಗಡೆಯಾಗಲಿದೆ. ಪ್ಯಾನ್ ಇಂಡಿಯಾ ಸಿನಿಮಾಗಳು ಇಂದು ಟ್ರೆಂಡ್ ಆಗಿದ್ದು, ಈಗ ಯಾವುದೂ ಒಂದು ಭಾಷೆಗೆ ಸೀಮಿತವಾಗಿಲ್ಲ. ನನ್ನ ಆದ್ಯತೆ ಕನ್ನಡ ಸಿನಿಮಾಗಳನ್ನು ನಿರ್ಮಾಣ ಮಾಡುವುದೇ ಆಗಿದ್ದರೂ, ಕ್ರಮೇಣ ಬೇರೆ ಭಾಷೆಗಳ ಸಿನಿಮಾಗಳನ್ನೂ ನಿರ್ಮಿಸುವ ಉದ್ದೇಶವಿದೆ ಎಂದು ಮಾಂಡ್ರೆ ತಿಳಿಸಿದ್ದಾರೆ. 

ಗಾಳಿಪಟ-2 ನಂತರ ಸ್ಕ್ರಿಪ್ಟ್ ಗಳನ್ನು ಆಲಿಸುತ್ತಿದ್ದೇನೆ. ಆದರೆ ಎಲ್ಲಿಯೂ ಸಹಿ ಹಾಕಿಲ್ಲ. ಇದೇ ವೇಳೆ ಗಾಳಿಪಟ-2 ಸಿನಿಮಾದಲ್ಲಿ ತಮ್ಮೊಂದಿಗೆ ನಟಿಸಿದ್ದ ಪವನ್ ಕುಮಾರ್ ಅವರೊಂದಿಗೆ ಸಿನಿಮಾ ಯೋಜನೆ ಇದೆ ಎಂದು ಹೇಳಿದ್ದಾರೆ. ಪವನ್ ಅವರ ಸಿನಿಮಾ ನಿರ್ದೇಶನದಲ್ಲಿ ವ್ಯಸ್ತರಾಗಲಿದ್ದಾರೆ, ನಾನು ಚಿತ್ರ ನಿರ್ಮಾಣದಲ್ಲಿ ವ್ಯಸ್ತಳಾಗಲಿದ್ದೇನೆ 2023 ರಿಂದ ಚಿತ್ರೀಕರಣ ಪ್ರಾರಂಭಿಸುವ ಯೋಜನೆ ಇದೆ ಎಂದು ಶರ್ಮಿಳಾ ಮಾಂಡ್ರೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT