ಹರ್ಷಿಕಾ ಪೂಣಚ್ಚ 
ಸಿನಿಮಾ ಸುದ್ದಿ

ವೆಬ್ ಸರಣಿ ಮೂಲಕ ಡಿಜಿಟಲ್ ಯುಗಕ್ಕೆ ನಟಿ ಹರ್ಷಿಕಾ ಪೂಣಚ್ಚ ಎಂಟ್ರಿ!

ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಇದೀಗ ವೆಬ್ ಸರಣಿಯೊಂದಿಗೆ ಡಿಜಿಟಲ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಕಮರ್ ಫಿಲ್ಮ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಇನ್ನೂ ಶೀರ್ಷಿಕೆಯಿಲ್ಲದ ವೆಬ್ ಸರಣಿಯ ಕೆಲಸಗಳು ನಡೆಯುತ್ತಿವೆ.

ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಇದೀಗ ವೆಬ್ ಸರಣಿಯೊಂದಿಗೆ ಡಿಜಿಟಲ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಕಮರ್ ಫಿಲ್ಮ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಇನ್ನೂ ಶೀರ್ಷಿಕೆಯಿಲ್ಲದ ವೆಬ್ ಸರಣಿಯ ಕೆಲಸಗಳು ನಡೆಯುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ತನ್ನ ಹೊಸ ಪ್ರಾಜೆಕ್ಟ್ ಬಗ್ಗೆ ಸುಳಿವು ನೀಡಿರುವ ನಟಿ, ನಮ್ಮೊಂದಿಗೆ ಕೆಲವು ವಿವರಗಳನ್ನು ಹಂಚಿಕೊಂಡಿದ್ದಾರೆ.

'ಇದು ಪ್ರವಾಸಕ್ಕೆ ಹೋಗುವ ನಾಲ್ಕು ಹುಡುಗಿಯರ ಸುತ್ತ ಸುತ್ತುತ್ತದೆ. ಒಂದು ಟ್ವಿಸ್ಟ್ ಇದೆ. ಅದು ನನ್ನ ಪಾತ್ರದ ಕುಶಿಯನ್ನು ಪ್ರಯಾಣಕ್ಕೆ ಕರೆದೊಯ್ಯುತ್ತದೆ. ಮುಂದೆ ಏನಾಗುತ್ತದೆ ಎಂಬುದು ಈ ಮೊದಲ ಸರಣಿಯ ಕಥಾವಸ್ತುವನ್ನು ರೂಪಿಸುತ್ತದೆ ಎಂದು ಹರ್ಷಿಕಾ ಹಂಚಿಕೊಂಡಿದ್ದಾರೆ. ಈ ಸರಣಿಯು ಪ್ರಸ್ತುತ ನೈಜತೆಯಿಂದ ಕೂಡಿದ್ದು ಪ್ರಭಾವಶಾಲಿಯಾಗಿದೆ ಎಂದು ನಟಿ ಹೇಳುತ್ತಾರೆ.

ಈ ಹಿಂದೆ ಶಿವರಾಜಕುಮಾರ್ ಮತ್ತು ಗಣೇಶ್ ಅಭಿನಯದ ಚಿತ್ರಗಳಿಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ಸುನಿಲ್ ವೆಬ್ ಸರಣಿಯ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಇದಕ್ಕೆ ಮುರಳಿ ಮೀಟ್ಸ್ ಮೀರಾ ಖ್ಯಾತಿಯ ಜೈ ಆನಂದ್ ಅವರ ಛಾಯಾಗ್ರಹಣವಿದೆ.

ನಿರ್ಮಾಪಕರು ಶೀಘ್ರದಲ್ಲೇ ಇತರ ಪಾತ್ರವರ್ಗದ ವಿವರಗಳನ್ನು ಬಹಿರಂಗಪಡಿಸುತ್ತಾರೆ. ಪ್ರೊಡಕ್ಷನ್ ಹೌಸ್ ಜನಪ್ರಿಯ OTT ಪ್ಲಾಟ್‌ಫಾರ್ಮ್‌ಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಏತನ್ಮಧ್ಯೆ, ಅಕ್ಟೋಬರ್ ಮೊದಲ ವಾರದಲ್ಲಿ ಟ್ರೇಲರ್ ಅನ್ನು ಬಹಿರಂಗಪಡಿಸಲು ತಯಾರಕರು ಯೋಜಿಸುತ್ತಿದ್ದಾರೆ.

ಈ ನಡುವೆ ಸದ್ಯ ಬೆರಳೆಣಿಕೆಯ ಚಿತ್ರಗಳ ನಡುವೆ ಜಗ್ಗಾಡುತ್ತಿರುವ ಹರ್ಷಿಕಾ, ಲಯ ಕೋಕಿಲಾ ನಿರ್ದೇಶನದ ಥೇಟ್ ಚಿತ್ರಕ್ಕೆ ಡಬ್ಬಿಂಗ್ ಮುಗಿಸಿದ್ದಾರೆ. ಇನ್ನು ವಿಜಯ್ ರಾಘವೇಂದ್ರ ಮತ್ತು ಉಮಾಶ್ರೀ ಅಭಿನಯದ ಕಾಸಿನ ಸರ ಮತ್ತು ನಿರ್ಮಾಣದ ವಿವಿಧ ಹಂತಗಳಲ್ಲಿ ಕಾಳ ನಾಗಿಣಿಯಲ್ಲಿ ಅಭಿನಯಿಸಲಿದ್ದಾರೆ.

'ಶೀಘ್ರದಲ್ಲೇ ಬೆಳ್ಳಿತೆರೆಯಲ್ಲಿ ನನ್ನ ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳಲಿದ್ದೇನೆ. ಯಾವ ಚಿತ್ರ 25ನೇ ಚಿತ್ರವಾಗಲಿದೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ ಎಂದು ನಟಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT