ನಟಿ ನಿಧಿ ಸುಬ್ಬಯ್ಯ 
ಸಿನಿಮಾ ಸುದ್ದಿ

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಳ್ಳಲಿದ್ದಾರೆ ದಿಗಂತ ಮತ್ತು ನಿಧಿ ಸುಬ್ಬಯ್ಯ ಜೋಡಿ

ನಿರ್ದೇಶಕ ಯೋಗರಾಜ್ ಭಟ್ ಅವರ ಪಂಚರಂಗಿ (2010) ಚಿತ್ರದ ಮೂಲಕ ಜನಪ್ರಿಯ ಆನ್ ಸ್ಕ್ರೀನ್ ಜೋಡಿಯಾಗಿದ್ದ ದಿಗಂತ್ ಮತ್ತು ನಿಧಿ ಸುಬಯ್ಯ ದಶಕದ ನಂತರ ಬೆಳ್ಳಿತೆರೆಯಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶಕ ಯೋಗರಾಜ್ ಭಟ್ ಅವರ ಪಂಚರಂಗಿ (2010) ಚಿತ್ರದ ಮೂಲಕ ಜನಪ್ರಿಯ ಆನ್ ಸ್ಕ್ರೀನ್ ಜೋಡಿಯಾಗಿದ್ದ ದಿಗಂತ್ ಮತ್ತು ನಿಧಿ ಸುಬಯ್ಯ ದಶಕದ ನಂತರ ಬೆಳ್ಳಿತೆರೆಯಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಸಮರ್ಥ್ ಬಿ ಕಡಕೋಳ್ ನಿರ್ದೇಶನದ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಇಬ್ಬರು ತೆರೆ ಹಂಚಿಕೊಳ್ಳಲಿದ್ದಾರೆ.

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್ ನಾಯಕನಾಗಿ ಮತ್ತು ಧನು ಹರ್ಷ ನಾಯಕಿಯಾಗಿ ನಟಿಸಿದ್ದರೆ, ನಿಧಿ ಸುಬ್ಬಯ್ಯ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿಧಿ ಈಗಾಗಲೇ ಚಿತ್ರತಂಡವನ್ನು ಸೇರಿಕೊಂಡಿದ್ದು, ತಮ್ಮ ಭಾಗಗಳ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರವನ್ನು ಗುರುದತ್ತ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಕಡಕೋಳ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಅವರ ಛಾಯಾಗ್ರಹಣವಿದೆ.

ಅಣ್ಣಾ ಬಾಂಡ್, ಕೃಷ್ಣನ ಮ್ಯಾರೇಜ್ ಸ್ಟೋರಿಯಲ್ಲಿ ನಟಿಸಿದ್ದ ನಟಿ, ಅಜಬ್ ಗಜಾಬ್ ಲವ್ ಮೂಲಕ ಬಾಲಿವುಡ್‌ನಲ್ಲೂ ಕಾಣಿಸಿಕೊಂಡಿದ್ದರು. ಇದಲ್ಲದೆ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ರೊಂದಿಗೆ ಸಣ್ಣ ಪರದೆಯಲ್ಲೂ ಕಾಣಿಸಿಕೊಂಡಿದ್ದರು.  ಪಿ. ವಾಸು ನಿರ್ದೇಶನದ ಶಿವರಾಜಕುಮಾರ್ ಅವರ ಆಯುಷ್ಮಾನ್ ಭವ ಸಿನಿಮಾದಲ್ಲಿ ನಿಧಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT