ಆಕಾಂಕ್ಷಾ ದುಬೆ 
ಸಿನಿಮಾ ಸುದ್ದಿ

ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ: ಮತ್ತೋರ್ವ ಆರೋಪಿ ಭೋಜ್‌ಪುರಿ ಗಾಯಕನಿಗೆ ಲುಕ್ ಔಟ್ ನೋಟಿಸ್ ಜಾರಿ

ಸಾರಾನಾಥ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ವಾರಣಾಸಿ: ಸಾರಾನಾಥ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಇಬ್ಬರು ಆರೋಪಿಗಳಾದ ಸಮರ್ ಸಿಂಗ್ ಮತ್ತು ಸಂಜಯ್ ಸಿಂಗ್ ದೇಶವನ್ನು ತೊರೆಯದಂತೆ ಎಲ್ಲಾ ವಿಮಾನ ನಿಲ್ದಾಣಗಳಿಗೆ ವಿವರಗಳನ್ನು ಕಳುಹಿಸಲಾಗಿದೆ ಎಂದು ಸಾರನಾಥ್ ಧರ್ಮಪಾಲ್ ಸಿಂಗ್ ತಿಳಿಸಿದ್ದಾರೆ.

ನಟಿಯ ತಾಯಿ ಮಧು ದುಬೆ ಪರ ಪ್ರಕರಣವನ್ನು ಕೈಗೆತ್ತಿಕೊಂಡಿರುವ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪ್ರಶ್ನೆಯನ್ನು ಎತ್ತಿದ್ದು, ವೈದ್ಯಕೀಯ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇನೆ ಮತ್ತು ಅದರ ಆಧಾರದ ಮೇಲೆ ಪೊಲೀಸರಿಗೆ ಪ್ರಶ್ನೆಗಳನ್ನು ಸಿದ್ಧಪಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ತ್ರಿಪಾಠಿ ಬುಧವಾರ ಸಿಬಿಐ ಅಥವಾ ಸಿಬಿ ಸಿಐಡಿಯಿಂದ ಈ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಅವರು, 25 ವರ್ಷದ ನಟಿಯ ಸಾವು ಆತ್ಮಹತ್ಯೆಯಿಂದಲ್ಲ. ಬದಲಿಗೆ, ಹೋಟೆಲ್ ಕೋಣೆಯಲ್ಲಿ ಕೆಲವರು ಆಕೆಯನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಅಂತ್ಯಸಂಸ್ಕಾರ ನಡೆಸಬೇಕು ಎಂದು ತಾಯಿ ಒತ್ತಾಯ ಮಾಡಿದರೂ, ಆಕಾಂಕ್ಷಾ ಶವವನ್ನು ಬಲವಂತವಾಗಿ ಸುಟ್ಟು ಹಾಕಲಾಗಿದೆ. ಭೋಜ್‌ಪುರಿ ಉದ್ಯಮದಲ್ಲಿ ಅನೇಕ ಪ್ರಸಿದ್ಧ ಜನರು ದುಬೆಯನ್ನು ಶೋಷಿಸುತ್ತಿದ್ದರು ಮತ್ತು ಅವರ ಕೆಲಸಕ್ಕೆ ಪಾವತಿಸುತ್ತಿರಲಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.

25 ವರ್ಷದ ನಟಿ ಮಾರ್ಚ್ 26 ರಂದು ಫ್ಯಾನ್‌ಗೆ ಬಟ್ಟೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು 'ಕಸಂ ಪೈದಾ ಕರ್ನೆ ವಾಲೆ ಕಿ 2', 'ಮುಜ್ಸೆ ಶಾದಿ ಕರೋಗಿ' (ಭೋಜ್‌ಪುರಿ) ಮತ್ತು 'ವೀರೋನ್ ಕೆ ವೀರ್' ಸೇರಿದಂತೆ ಹಲವಾರು ಪ್ರಾದೇಶಿಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT