ಕಬ್ಜ ಸಿನಿಮಾ ಸ್ಚಿಲ್ 
ಸಿನಿಮಾ ಸುದ್ದಿ

ಆರ್.ಚಂದ್ರು ನಿರ್ದೇಶನದ 'ಕಬ್ಜ' ಒಟಿಟಿ ರಿಲೀಸ್ ಡೇಟ್ ಫಿಕ್ಸ್!

ಆರ್ ಚಂದ್ರು ನಿರ್ದೇಶಿಸಿ- ಉಪೇಂದ್ರ, ಕಿಚ್ಚ ಸುದೀಪ್ ಮತ್ತು ಶಿವರಾಜಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಕಬ್ದ ಸಿನಿಮಾ ಮಾರ್ಚ್ 17 ರಂದು ಥಿಯೇಟರ್ ಗಳಲ್ಲಿ ರಿಲೀಸ್ ಆಗಿತ್ತು.

ಆರ್ ಚಂದ್ರು ನಿರ್ದೇಶಿಸಿ- ಉಪೇಂದ್ರ, ಕಿಚ್ಚ ಸುದೀಪ್ ಮತ್ತು ಶಿವರಾಜಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಕಬ್ದ ಸಿನಿಮಾ ಮಾರ್ಚ್ 17 ರಂದು ಥಿಯೇಟರ್ ಗಳಲ್ಲಿ ರಿಲೀಸ್ ಆಗಿತ್ತು.

ಸಿನಿಮಾ ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈ ನಡುವೆಯೂ ಓಟಿಟಿಯಲ್ಲಿ ಕಬ್ಜ ಲಭ್ಯವಾಗಲಿದೆ. ಮೊನ್ನೆಗೆ ಕಬ್ಜ ರಿಲೀಸ್ ಆಗಿ 25 ದಿನಗಳನ್ನು ಪೂರೈಸಿದೆ. 50ನೇ ದಿನದತ್ತ ಮುನ್ನುಗ್ಗಿದೆ. ಈ ಮಧ್ಯೆಯೂ ಸಿನಿಮಾ ಏಪ್ರಿಲ್ 14 ರಂದು ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಲಭ್ಯವಾಗಲಿದೆ.

ಏಪ್ರಿಲ್ 14 ರಂದು  ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಕನ್ನಡದ ಜೊತೆಗೆ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಪ್ರದರ್ಶನವಾಗಲಿದೆ. ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ, ಅದರೆ 1942 ರಲ್ಲಿ, ಕಬ್ಜ ಸರಳ ವ್ಯಕ್ತಿಯ ಕಥೆಯನ್ನು ವಿವರಿಸುತ್ತದೆ.

ಪರಿಸ್ಥಿತಿಗಳ ಕಾರಣದಿಂದಾಗಿ ದೇಶದ ಅತ್ಯಂತ ಭಯಾನಕ ದರೋಡೆಕೋರರಾಗಿ ಬೆಳೆಯುತ್ತಾನೆ. ಹತ್ಯೆಯಾದ ಸ್ವಾತಂತ್ರ್ಯ ಹೋರಾಟಗಾರನ ಕಿರಿಯ ಮಗ ಅರ್ಕೇಶ್ವರ (ಉಪೇಂದ್ರ) ತನ್ನ ಅಣ್ಣನನ್ನು ಹಿಂಸೆಯಿಂದ ಕಳೆದುಕೊಳ್ಳುತ್ತಾನೆ.

ಕುಟುಂಬದಲ್ಲಿ ಉಂಟಾದ ನಷ್ಟದಿಂದಾಗಿ ಆತ ಭೂಗತ ಜಗತ್ತಿನ ನಿರ್ವಿವಾದ ರಾಜನಾಗುತ್ತಾನೆ. ಚಿತ್ರದಲ್ಲಿ ಶ್ರಿಯಾ ಶರಣ್, ಕಾಮರಾಜನ್, ಅನೂಪ್ ರೇವಣ್ಣ, ಕಬೀರ್ ದುಹಾನ್ ಸಿಂಗ್, ಡ್ಯಾನಿಶ್ ಅಖ್ತರ್ ಸೈಫಿ, ಪ್ರದೀಪ್ ರಾವತ್, ಜಯಪ್ರಕಾಶ್ ಮತ್ತು ಕೋಟಾ ಶ್ರೀನಿವಾಸ್ ಮುಂತಾದವರು ನಟಿಸಿದ್ದಾರೆ.

ಕಬ್ಜ ಸಿನಿಮಾಗೆ, ರವಿ ಬಸ್ರೂರ್ ಅವರ ಸಂಗೀತ ಮತ್ತು ಎಜೆ ಶೆಟ್ಟಿ ಮತ್ತು ಮಹೇಶ್ ರೆಡ್ಡಿ ಅವರ ಛಾಯಾಗ್ರಹಣವ ಮತ್ತು ಸಂಕಲನವಿದೆ. ಚಿತ್ರದ ಸಾಹಸಗಳನ್ನು ರವಿವರ್ಮ, ವಿಕ್ರಮ್ ಮೋರ್ ಮತ್ತು ವಿಜಯ್ ನೃತ್ಯ ಸಂಯೋಜನೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

SCROLL FOR NEXT