ಕಾಂತಾರ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಥಿಯೇಟರ್, ಒಟಿಟಿಯಲ್ಲಿ ಕಾಂತಾರ ಹಾಡು 'ವರಾಹ ರೂಪಂ' ಬಳಸದಂತೆ ಕೋರ್ಟ್ ಆದೇಶ

ಕನ್ನಡದ ಆಕ್ಷನ್-ಥ್ರಿಲ್ಲರ್ ಕಾಂತಾರ ಚಿತ್ರದ ವಿವಾದಾತ್ಮಕ 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಒಟಿಟಿ ಮತ್ತು ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸುವುದನ್ನು ನಿರ್ಬಂಧಿಸಿ ಕೇರಳದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಿರುವನಂತಪುರಂ: ಕನ್ನಡದ ಆಕ್ಷನ್-ಥ್ರಿಲ್ಲರ್ ಕಾಂತಾರ ಚಿತ್ರದ ವಿವಾದಾತ್ಮಕ 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಒಟಿಟಿ ಮತ್ತು ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸುವುದನ್ನು ನಿರ್ಬಂಧಿಸಿ ಕೇರಳದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದು ಮೇಲ್ನೋಟಕ್ಕೆ ಕೃತಿಚೌರ್ಯ ಕಾಯ್ದೆ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ. 

ಕಳೆದ ವರ್ಷ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ ‘ಕಾಂತಾರ’ ಗೀತೆ ವರಾಹ ರೂಪವನ್ನು ‘ನವರಸಂ’ ಗೀತೆಯಿಂದ ನಕಲು ಮಾಡಿರುವುದಕ್ಕೆ ಆ ಹಾಡಿನ ಹಕ್ಕುಸ್ವಾಮ್ಯ ಹೊಂದಿರುವ ಜನಪ್ರಿಯ ಮ್ಯೂಸಿಕ್ ಬ್ಯಾಂಡ್, ಥೈಕುಡಮ್ ಬ್ರಿಡ್ಜ್ ಮತ್ತು ಮಾತೃಭೂಮಿ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ಗೆ ಬಾಕಿ ಕ್ರೆಡಿಟ್ ನೀಡುವಂತೆ ಪ್ರಥಮ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಕೆ.ಇ. ಕೆ ಇ ಸಾಲಿಹ್ ನಿರ್ದೇಶಿಸಿದ್ದಾರೆ. 

ಕಳೆದ ವರ್ಷ ಸೆಪ್ಟೆಂಬರ್ 30 ರಂದು ಕಾಂತಾರ ಬಿಡುಗಡೆಯಾದ ಕೆಲ ದಿನಗಳಲ್ಲಿಯೇ ಕಾನೂನು ಹೋರಾಟ ಆರಂಭಿಸಲಾಗಿತ್ತು. ವೈಯಕ್ತಿಕ ಶೈಲಿ, ಗತಿ ಮತ್ತು ಮಧುರವನ್ನು ಉಳಿಸಿಕೊಂಡು ಭಾರತೀಯ ಶಾಸ್ತ್ರೀಯ ಜೊತೆ ರಾಕ್ ಸಂಗೀತದ ಸಮ್ಮಿಳನಕ್ಕಾಗಿ ಜನಪ್ರಿಯವಾಗಿರುವ ಥೈಕ್ಕುಡಮ್ ಬ್ರಿಡ್ಜ್‌ನ ನವರಸಂ (2015) ನಿಂದ ಸ್ಫೂರ್ತಿ ಪಡೆದಿರುವುದಾಗಿ ಟ್ರ್ಯಾಕ್‌ನ ಸಂಗೀತ ನಿರ್ದೇಶಕರು ಸ್ವತಃ ಒಪ್ಪಿಕೊಂಡಿರುವುದನ್ನು ಗುರುವಾರ ಪರಿಗಣಿಸಿದ ನ್ಯಾಯಾಲಯ, ಈ ಹಾಡನ್ನು ಥಿಯೇಟರ್ ಹಾಗೂ ಓಟಿಟಿಯಲ್ಲಿ ಬಳಸದಂತೆ ಮಧ್ಯಂತರ ಆದೇಶ ನೀಡಿತು.

ನವರಸಂ ಹಾಡನ್ನು ನಕಲು ಮಾಡುವ ಮೂಲಕ ಹಕ್ಕುಸ್ವಾಮ್ಯ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಕೃತಿಸ್ವಾಮ್ಯ ಕಾಯ್ದೆ 1957 (ಹಕ್ಕುಸ್ವಾಮ್ಯ ಉಲ್ಲಂಘನೆ) ಸೆಕ್ಷನ್ 64 ರ ಅಡಿಯಲ್ಲಿ ಕೃತಿಚೌರ್ಯ ಹಾಡಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಕಳೆದ ವಾರ ಕೋಝಿಕ್ಕೋಡ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಸೂಚನೆ ನೀಡಿತ್ತು.

ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ಆರೋಪಿಸಿ ಮಾತೃಭೂಮಿ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರಕರಣದ ಪ್ರಗತಿ ವರದಿಯನ್ನು ಮೇ 4 ರೊಳಗೆ ನ್ಯಾಯಾಲಯಕ್ಕೆ ನೀಡುವಂತೆ ಕೋಝಿಕ್ಕೋಡ್ ನ್ಯಾಯಾಲಯ ತನಿಖಾಧಿಕಾರಿಗೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT