ಸ್ಕ್ಯಾಮ್ 1770 ಟೀಸರ್ ರಿಲೀಸ್ 
ಸಿನಿಮಾ ಸುದ್ದಿ

ಸ್ಕ್ಯಾಮ್-1770 ಚಿತ್ರದ ಟೀಸರ್ ರಿಲೀಸ್‌ ಮಾಡಿದ ಹಿರಿಯ ನಟ ದತ್ತಣ್ಣ

ನಮ್ಮ‌ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎಂದು ಹಿರಿಯ ನಟ ದತ್ತಣ್ಣ ಅಭಿಪ್ರಾಯ ಪಟ್ಟಿದ್ದಾರೆ.

ನಮ್ಮ‌ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎಂದು ಹಿರಿಯ ನಟ ದತ್ತಣ್ಣ ಅಭಿಪ್ರಾಯ ಪಟ್ಟಿದ್ದಾರೆ.

ಸ್ಕ್ಯಾಮ್ 1770 ಸಿನಿಮಾ ಟೀಸರ್ ಬಿಡುಗಡೆ ಮಾತನಾಡಿದ ಅವರು,  ಶಿಕ್ಷಣದ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಬಗ್ಗೆ ಈ ಚಿತ್ರ ಬರುತ್ತಿದೆ‌ . ಚಿತ್ರ ಯಶಸ್ವಿಯಾಗಲಿ ಎಂದು ದತ್ತಣ್ಣ ಹಾರೈಸಿದರು.

ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ SCAM (1770). ಯಾವ ಅಭ್ಯಾಸ ತಪ್ಪಿದರೂ ಬದುಕಬಹುದು. ಆದರೆ ವಿದ್ಯಾಭ್ಯಾಸ ತಪ್ಪಿದ್ದರೆ ಬದುಕುವುದು ಕಷ್ಟ. ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಶಿಕ್ಷಣಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರವಿದು. ಟೀಸರ್ ಬಿಡುಗಡೆ ಮಾಡಿಕೊಟ್ಟ ದತ್ತಣ್ಣ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ  ಎಂದು ನಿರ್ದೇಶಕ ವಿಕಾಸ್ ಪುಷ್ಪಗಿರಿ ಹೇಳಿದರು.

ಇದು ಲಾಕ್‌ಡೌನ್ ಸಮಯದಲ್ಲಿ ಮೂಡಿದ ಕಥೆಯಾಗಿದೆ ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಅನೇಕ ಪ್ರಕರಣಗಳ ಮೇಲೆ ಮಾಡಿದ ಸಂಶೋಧನೆಯನ್ನು ನಾನು ಆಧರಿಸಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ನೋಡಲೇಬೇಕಾದ ಚಿತ್ರವಿದು ಎಂದು  ನಿರ್ದೇಶಕರು ತಿಳಿಸಿದ್ದಾರೆ.

ಡಿ.ಕ್ರಿಯೇಷನ್ಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡಿರುವ ದೇವರಾಜ್ ಅವರು ಚಿತ್ರದ ಮಾತನಾಡಿದರು. ನಾಯಕ ರಂಜನ್("ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ" ಚಿತ್ರದ ಖ್ಯಾತಿ),  ನಿಶ್ಚಿತ, ಹರಿಣಿ, ನಾರಾಯಣಸ್ವಾಮಿ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್, ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಬರೆಯುತ್ತಿರುವ ಶಂಕರ್ ರಾಮನ್ ಮುಂತಾದ ಚಿತ್ರತಂಡದ ಸದಸ್ಯರು "SCAM (1770)" ಚಿತ್ರದ ಕುರಿತು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT