ಅಲ್ಲು ರಮೇಶ್ 
ಸಿನಿಮಾ ಸುದ್ದಿ

ಹಾಸ್ಯ ನಟ ಅಲ್ಲು ರಮೇಶ್ ಹೃದಯಘಾತದಿಂದ ನಿಧನ

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ.

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ

ಎದೆನೋವಿನಿಂದ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ವಿಶಾಖಪಟ್ಟಣಂ ಮೂಲದ ಅಲ್ಲು ರಮೇಶ್ ಅವರು ಚಿರುಜಲ್ಲು, ವೇದಿ, ಬ್ಲೇಡ್ ಬಾಬ್ಜಿ, ನೆಪೋಲಿಯನ್ ಸೇರಿದಂತೆ 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ಹಾಗೂ ಪೋಷಕ ನಟನಾಗಿ ಅಭಿನಯಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಅವರ ನಿಧನಕ್ಕೆ ತೆಲುಗು ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಅಲ್ಲು ರಮೇಶ್ ಅವರ ನಿಧನ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ ಆನಂದ್ ರವಿ, 'ಮೊದಲ ದಿನದಿಂದಲೂ ನನಗೆ ನೀವು ದೊಡ್ಡ ಬೆಂಬಲವಾಗಿ ನಿಂತಿದ್ದೀರಿ.

ಈಗಲೂ ನಾನು ನಿಮ್ಮ ಧ್ವನಿಯನ್ನು ಕೇಳಬಲ್ಲೆ. ರಮೇಶ್ ಅವರೇ, ನಿಮ್ಮ ನಿಧನದ ಸುದ್ದಿಯನ್ನು ನನ್ನಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ಹೃದಯಗಳಿಗೆ ನೀವು ಹತ್ತಿರವಾಗಿದ್ದೀರಿ.. ಮಿಸ್ ಯೂ.. ಓಂ ಶಾಂತಿ..' ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT