ಅಲ್ಲು ರಮೇಶ್ 
ಸಿನಿಮಾ ಸುದ್ದಿ

ಹಾಸ್ಯ ನಟ ಅಲ್ಲು ರಮೇಶ್ ಹೃದಯಘಾತದಿಂದ ನಿಧನ

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ.

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ

ಎದೆನೋವಿನಿಂದ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ವಿಶಾಖಪಟ್ಟಣಂ ಮೂಲದ ಅಲ್ಲು ರಮೇಶ್ ಅವರು ಚಿರುಜಲ್ಲು, ವೇದಿ, ಬ್ಲೇಡ್ ಬಾಬ್ಜಿ, ನೆಪೋಲಿಯನ್ ಸೇರಿದಂತೆ 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ಹಾಗೂ ಪೋಷಕ ನಟನಾಗಿ ಅಭಿನಯಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಅವರ ನಿಧನಕ್ಕೆ ತೆಲುಗು ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಅಲ್ಲು ರಮೇಶ್ ಅವರ ನಿಧನ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ ಆನಂದ್ ರವಿ, 'ಮೊದಲ ದಿನದಿಂದಲೂ ನನಗೆ ನೀವು ದೊಡ್ಡ ಬೆಂಬಲವಾಗಿ ನಿಂತಿದ್ದೀರಿ.

ಈಗಲೂ ನಾನು ನಿಮ್ಮ ಧ್ವನಿಯನ್ನು ಕೇಳಬಲ್ಲೆ. ರಮೇಶ್ ಅವರೇ, ನಿಮ್ಮ ನಿಧನದ ಸುದ್ದಿಯನ್ನು ನನ್ನಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ಹೃದಯಗಳಿಗೆ ನೀವು ಹತ್ತಿರವಾಗಿದ್ದೀರಿ.. ಮಿಸ್ ಯೂ.. ಓಂ ಶಾಂತಿ..' ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT