ಶರತ್ ಬಾಬು 
ಸಿನಿಮಾ ಸುದ್ದಿ

ಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಬಹು ಅಂಗಾಂಗ ಹಾನಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇತ್ತೀಚಿನ ವಾರಗಳಲ್ಲಿ ಇದೀಗ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

1973 ರಲ್ಲಿ ತೆಲುಗು ಚಿತ್ರಕ್ಕೆ ಪದಾರ್ಪಣೆ ಮಾಡಿದ ಶರತ್ ಬಾಬು ಅವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯ ಹಲವಾರು ಚಲನಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಪೋಷಕ ಪಾತ್ರಗಳಲ್ಲಿ ಅತ್ಯುತ್ತಮ ನಟನೆಗಾಗಿ ಶರತ್ ಬಾಬು ಅವರಿಗೆ ಒಂಬತ್ತು ಬಾರಿ ನಂದಿ ಪ್ರಶಸ್ತಿ ಲಭಿಸಿದೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ಗಣ್ಯರು ಸೇರಿದಂತೆ ನಾನಾ ಕಡೆಯಿಂದ ಹಾರೈಕೆಗಳು ಹರಿದು ಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT