ಶರತ್ ಬಾಬು 
ಸಿನಿಮಾ ಸುದ್ದಿ

ಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಬಹು ಅಂಗಾಂಗ ಹಾನಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇತ್ತೀಚಿನ ವಾರಗಳಲ್ಲಿ ಇದೀಗ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

1973 ರಲ್ಲಿ ತೆಲುಗು ಚಿತ್ರಕ್ಕೆ ಪದಾರ್ಪಣೆ ಮಾಡಿದ ಶರತ್ ಬಾಬು ಅವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯ ಹಲವಾರು ಚಲನಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಪೋಷಕ ಪಾತ್ರಗಳಲ್ಲಿ ಅತ್ಯುತ್ತಮ ನಟನೆಗಾಗಿ ಶರತ್ ಬಾಬು ಅವರಿಗೆ ಒಂಬತ್ತು ಬಾರಿ ನಂದಿ ಪ್ರಶಸ್ತಿ ಲಭಿಸಿದೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ಗಣ್ಯರು ಸೇರಿದಂತೆ ನಾನಾ ಕಡೆಯಿಂದ ಹಾರೈಕೆಗಳು ಹರಿದು ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT