ಪ್ರಶಾಂತ್ ನೀಲ್ ಮತ್ತು ರವಿ ಬಸ್ರೂರ್ 
ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ 'ಸಲಾರ್' ರೀ-ರೆಕಾರ್ಡಿಂಗ್ ಕೆಲಸದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್-ರವಿ ಬಸ್ರೂರ್ ಬ್ಯುಸಿ

'ಸಲಾರ್- ಸೀಸ್ ಫೈರ್' ಎಂಬ ಶೀರ್ಷಿಕೆಯ ಚಿತ್ರದ ಮೊದಲ ಭಾಗದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಪ್ರಶಾಂತ್ ನೀಲ್ ಮತ್ತು ಸಂಗೀತ ಸಂಯೋಜಕ ರವಿ ಬಸ್ರೂರ್ ಸದ್ಯ ಕುಂದಾಪುರದ ಬಸ್ರೂರು ಗ್ರಾಮದ ಲ್ಯಾಟರ್ಸ್ ಸ್ಟುಡಿಯೋದಲ್ಲಿ ರೀ-ರೆಕಾರ್ಡಿಂಗ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. 

ಪ್ರಭಾಸ್ ಅಭಿನಯದ ಪ್ರಶಾಂತ್ ನೀಲ್ ಅವರ ಬಹು ನಿರೀಕ್ಷಿತ ಚಿತ್ರ ಸಲಾರ್ ಸೆಪ್ಟೆಂಬರ್ 28ರಂದು ಬಿಡುಗಡೆಯಾಗಲಿದೆ. ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಕಾಂಬಿನೇಷನ್ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರ ದಕ್ಷಿಣ ಭಾರತದ ನಾಲ್ಕು ಪ್ರಮುಖ ಭಾಷೆಗಳು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. 

'ಸಲಾರ್- ಸೀಸ್ ಫೈರ್' ಎಂಬ ಶೀರ್ಷಿಕೆಯ ಚಿತ್ರದ ಮೊದಲ ಭಾಗದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಪ್ರಶಾಂತ್ ನೀಲ್ ಮತ್ತು ಸಂಗೀತ ಸಂಯೋಜಕ ರವಿ ಬಸ್ರೂರ್ ಸದ್ಯ ಕುಂದಾಪುರದ ಬಸ್ರೂರು ಗ್ರಾಮದ ಲ್ಯಾಟರ್ಸ್ ಸ್ಟುಡಿಯೋದಲ್ಲಿ ರೀ-ರೆಕಾರ್ಡಿಂಗ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕರು ಮತ್ತು ಚಿತ್ರತಂಡ ಕಳೆದ ಮೂರು ವಾರಗಳಿಂದ ಅಲ್ಲಿಯೇ ಬೀಡು ಬಿಟ್ಟಿದೆ. ಇದರೊಂದಿಗೆ, ನಿರ್ದೇಶಕರು ಚಿತ್ರದ ಪ್ರಗತಿಯ ಇತರ ಅಂಶಗಳನ್ನು ಸಹ ನೋಡಿಕೊಳ್ಳುತ್ತಾರೆ.

ನಿರ್ಮಾಪಕ ವಿಜಯ್ ಕಿರಗಂದೂರು ಸಹ ನಿರ್ದೇಶಕರೊಂದಿಗೆ ಚಿತ್ರದ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಚಿತ್ರತಂಡವು ಕೆಲವು ದಿನಗಳು ಬಸ್ರೂರಿಗೆ ಭೇಟಿ ನೀಡಿತ್ತು. ಈಮಧ್ಯೆ, ತೆಲುಗು ಮತ್ತು ಇತರ ಭಾಷೆಗಳಿಗೆ ಈಗಾಗಲೇ ಡಬ್ಬಿಂಗ್ ಪೂರ್ಣಗೊಂಡಿದ್ದು, ಕನ್ನಡ ಆವೃತ್ತಿ ಮಾತ್ರ ಬಾಕಿ ಉಳಿದಿದೆ. ಇದು ಬೆಂಗಳೂರಿನ ಆಕಾಶ್ ಡಬ್ಬಿಂಗ್ ಸ್ಟುಡಿಯೋದಲ್ಲಿ ನಿರ್ದೇಶಕ ಡಾ. ಸೂರಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತದೆ.

ಕೆಜಿಎಫ್ ಮತ್ತು ಕಾಂತಾರಂತಹ ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ ಹೊಂಬಾಳೆ ಫಿಲಂಸ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರತಂಡ ಈ ಹಿಂದೆ ಜುಲೈ 6 ರಂದು ಸಲಾರ್‌ನ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿತು. ಸದ್ಯ ತಂಡವು ಚಿತ್ರದ ಟ್ರೈಲರ್ ಬಿಡುಗಡೆಗೆ ಕೆಲಸ ಮಾಡುತ್ತಿದ್ದು, ಅದು ಈ ತಿಂಗಳಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕೆಜಿಎಫ್ ಸರಣಿಯ ಯಶಸ್ಸಿನ ನಂತರ, ಸಲಾರ್‌ ಸಿನಿಮಾ ಮಾಡುತ್ತಿರುವ ಪ್ರಶಾಂತ್ ನೀಲ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಪ್ರಭಾಸ್ ಅವರು ಆದಿಪುರುಷ ಸಿನಿಮಾ ನಂತರ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ 'ಕಲ್ಕಿ 2898 AD' ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT