ತೋತಾಪುರಿ 2 ಚಿತ್ರದಲ್ಲಿ ಧನಂಜಯ್ ಮತ್ತು ಜಗ್ಗೇಶ್ 
ಸಿನಿಮಾ ಸುದ್ದಿ

ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾದೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ಕಾದಾಡಲು 'ತೋತಾಪುರಿ 2' ಸಿದ್ಧ!

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ  ಜೈಲರ್ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆಯಾಗಲಿದೆ. ಹೀಗಾಗಿ, ಆ ವಾರದಲ್ಲಿ ಯಾವುದೇ ಕನ್ನಡ ಚಿತ್ರಗಳು ತಮ್ಮ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಆದರೆ, 'ತೋತಾಪುರಿ 2' ಸಿನಿಮಾ ಈ ಟ್ರೆಂಡ್ ಅನ್ನು ಮುರಿದು ಈಗ ಆಗಸ್ಟ್ 11ರಂದು ಬಿಡುಗಡೆ ದಿನಾಂಕವನ್ನು ಘೋಷಿಸಿದೆ. 

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ  ಜೈಲರ್ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆಯಾಗಲಿದೆ. ಹೀಗಾಗಿ, ಆ ವಾರದಲ್ಲಿ ಯಾವುದೇ ಕನ್ನಡ ಚಿತ್ರಗಳು ತಮ್ಮ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಆದರೆ, 'ತೋತಾಪುರಿ 2' ಸಿನಿಮಾ ಈ ಟ್ರೆಂಡ್ ಅನ್ನು ಮುರಿದು ಈಗ ಆಗಸ್ಟ್ 11ರಂದು ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಸ್ಪರ್ಧೆಗೆ ಸಿದ್ಧವಾಗಿದೆ.

ವಿಜಯ ಪ್ರಸಾದ್ ನಿರ್ದೇಶಿಸಿದ ತೋತಾಪುರಿಯ ಮೊದಲ ಭಾಗವು ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದಿತ್ತು. ಸಮುದಾಯದ ಯೋಗಕ್ಷೇಮದ ಬಗೆಗಿನ ಕಥಾಹಂದರದೊಂದಿಗೆ ನಟರಾದ ಜಗ್ಗೇಶ್ ಮತ್ತು ಧನಂಜಯ್ ಚಿತ್ರದಲ್ಲಿ ನಟಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ತೋತಾಪುರಿ 2 ಚಿತ್ರ ಇದೀಗ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಇನ್ನು ಚಿತ್ರದಲ್ಲಿ ನಟಿಯರಾದ ಅದಿತಿ ಪ್ರಭುದೇವ ಮತ್ತು ಸುಮನ್ ರಂಗನಾಥ್ ಕೂಡ ಇದ್ದಾರೆ.

ತೋತಾಪುರಿಯ ಮೊದಲ ಭಾಗದಲ್ಲಿ 'ಬಾಗ್ಲು ತೆಗಿ ಮೇರಿ ಜಾನ್' ಎಂಬ ಶೀರ್ಷಿಕೆಯ ಹಾಡು ಹಿಟ್ ಆಗಿತ್ತು. ಇದೀಗ ತೋತಾಪುರಿ-2 ಚಿತ್ರದ ಮೊದಲ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಧನಂಜಯ್ ಮತ್ತು ಸುಮನ್ ರಂಗನಾಥ್ ಅವರನ್ನು ಒಳಗೊಂಡಿರುವ 'ಮೊದಲ ಮಳೆ ಮನದೊಳಗೆ ಸುರಿದಿದೆ...' ಎಂಬ ಸುಮಧುರ ಗೀತೆಯನ್ನು ಸಂಜಿತ್ ಹೆಗ್ಡೆ ಹಾಡಿದ್ದು, ಈ ಹಾಡು ಈಗಾಗಲೇ ಸಂಗೀತ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಧನಂಜಯ್ ಮತ್ತು ಸುಮನ್ ರಂಗನಾಥ್

ಈ ಚಿತ್ರವನ್ನು ಸುರೇಶ್ ಕೆಎ ನಿರ್ಮಿಸಿದ್ದು, ತೋತಾಪುರಿ 2 ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಕೆಲಸ ಭರದಿಂದ ಸಾಗಿದೆ. 'ಎರಡನೇ ಭಾಗ ರೋಮಾಂಚನಕಾರಿಯಾಗಿದೆ'. ಇದೊಂದು ತಪ್ಪಿಸಿಕೊಳ್ಳಲು ಬಯಸದ ಸಿನಿಮಾ ಅನುಭವವನ್ನು ನೀಡುತ್ತದೆ ಎನ್ನುತ್ತದೆ ಚಿತ್ರತಂಡ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT