ಉಸಿರೆ ಉಸಿರೆ ಚಿತ್ರದ ಸ್ಟಿಲ್. 
ಸಿನಿಮಾ ಸುದ್ದಿ

ಕಿಚ್ಚ ಸುದೀಪ್'ಗೆ ಸದಾ ಋಣಿಯಾಗಿರುತ್ತೇನೆ: ಬಿಗ್ ಬಾಸ್ ಖ್ಯಾತಿಯ ರಾಜೀವ್

ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೆ ಉಸಿರೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೊದಲ ಹಾಡನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೆ ಉಸಿರೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೊದಲ ಹಾಡನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.

"ಉಸಿರೇ ನನ್ನ ಉಸಿರೇ" ಹಾಡು ಚಿತ್ರದ ಪ್ಯಾತೋ ಸಾಂಗ್ ಆಗಿದ್ದು, ಹಾಡನ್ನು ಕೆ ಕಲ್ಯಾಣ್ ಬರೆದಿದ್ದಾರೆ,  ಗೀತೆಯನ್ನು ವಾಸುಕಿ ವೈಭವ್ ಹಾಡಿದ್ದರೆ, ವಿವೇಕ್ ಚಕ್ರವರ್ತಿ ಹಾಡನ್ನು ಸಂಯೋಜಿಸಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕರು, ಎಲ್ಲರೂ ಸಾಮಾನ್ಯವಾಗಿ ಮೊದಲು ಡ್ಯುಯೆಟ್ ಸಾಂಗ್ ಬಿಡುಗಡೆ ಮಾಡುತ್ತಾರೆ. ಆದರೆ, ನಾವು ಪ್ಯಾತೋ ಸಾಂಗ್ ಬಿಡುಗಡೆ ಮಾಡಿದ್ದೇವೆ. ಈ ಹಾಡಿನಲ್ಲಿ ಇಡೀ ಚಿತ್ರದ ಕಥೆಯಿದೆ. ಹಾಗಾಗಿ ಈ ಹಾಡನ್ನು ಮೊದಲು ಬಿಡುಗಡೆ ಮಾಡಿದೆವು. ಉದ್ದೇಶಪೂರ್ವಕವಾಗಿಯೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಹಾಡನ್ನು ಗಮನವಿಟ್ಟು ಕೇಳಿದಾಗ ನಮ್ಮ ಸಿನಿಮಾದ ಕಥೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಉಸಿರೆ ಉಸಿರೆ ಚಿತ್ರದಲ್ಲಿ ಶ್ರೀಜಿತಾ, ರಾಜೀವ್

ನಟ ರಾಜೀವ್ ಅವರು ಮಾತನಾಡಿ, ಕಿಚ್ಚ ಸುದೀಪ್ ಅವರಿಗೆ ಸದಾ ಋಣಿಯಾಗಿದ್ದೇನೆ. ಸುದೀಪ್ ಅವರೇ ನಮಗೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಸುದೀಪ್ ಅವರ ಅಭಿನಯದ ಸನ್ನಿವೇಶಗಳು ಸುಮಾರು 18 ನಿಮಿಷಗಳು ಬರುತ್ತದೆ‌. ಸುದೀಪ್ ಅವರಿಗೆ ಮತ್ತು ಇಡೀ ಚಿತ್ರ ತಂಡಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆಗಳ ನಡೆಸುತ್ತಿದೆ.

ಚಿತ್ರದಲ್ಲಿ ರಾಜೀವ್ ಜೊತೆಗೆ ಶ್ರೀಜಿತಾ ನಾಯಕಿಯಾಗಿ ನಟಿಸಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಖ್ಯಾತ ತೆಲುಗು ನಟರಾದ ಡಾ ಅಲಿ ಮತ್ತು ಬ್ರಹ್ಮಾನಂದಂ, ದೇವರಾಜ್, ಸಾಧುಕೋಕಿಲಾ ಮತ್ತು ಮಂಜು ಪಾವಗಡ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT