ಶೀಲ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ 
ಸಿನಿಮಾ ಸುದ್ದಿ

ರಾಗಿಣಿ ದ್ವಿವೇದಿ ಅಭಿನಯದ ಮಹಿಳಾ ಪ್ರಧಾನ ಸಿನಿಮಾ 'ಶೀಲ' ಬಿಡುಗಡೆಗೆ ದಿನಾಂಕ ಫಿಕ್ಸ್

'ಶೀಲ' ಎಂಬ ಶೀರ್ಷಿಕೆಯ ಸ್ತ್ರೀ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿದೆ. ಇದೀಗ ಕನ್ನಡದಲ್ಲಿ ರಾಜ್ಯದಲ್ಲಿ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಗಿಣಿ ದ್ವಿವೇದಿ ಅವರೀಗ ಸಾಲು ಸಾಲು ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟಿ ನಂದಕಿಶೋರ್ ಅವರ ಬಹುಭಾಷಾ ಸಿನಿಮಾ 'ವೃಷಭ' ಸಿನಿಮಾದಲ್ಲಿ ಮಲಯಾಳಂನ ಖ್ಯಾತ ನಟ ಮೋಹನ್‌ಲಾಲ್ ಅವರೊಂದಿಗೆ ನಟಿಸುತ್ತಿದ್ದಾರೆ. ಸದ್ಯ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಈಮಧ್ಯೆ, 'ಶೀಲ' ಎಂಬ ಶೀರ್ಷಿಕೆಯ ಸ್ತ್ರೀ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿದೆ. ಇದೀಗ ಕನ್ನಡದಲ್ಲಿ ಆಗಸ್ಟ್ 4 ರಂದು ರಾಜ್ಯದಲ್ಲಿ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದೊಂದು ಮಹಿಳಾ ಪ್ರದಾನ ಚಿತ್ರವಾಗಿದ್ದು, ಹೆಣ್ಣುಮಕ್ಕಳು ದಿನನಿತ್ಯದ ಬದುಕಿನಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಸುತ್ತ ಸುತ್ತುತ್ತದೆ. ಹೆಣ್ಣು ಮನಸ್ಸು ಮಾಡಿದರೆ ತನಗೆ ಎದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎನ್ನುತ್ತದೆ ಚಿತ್ರತಂಡ.

ಪ್ರಿಯಾಂಕಾ ಉಪೇಂದ್ರ ಮತ್ತು ರಾಗಿಣಿ ದ್ವಿವೇದಿ

ಚಿತ್ರದ ಟ್ರೇಲರ್ ಅನ್ನು ಪ್ರಿಯಾಂಕಾ ಉಪೇಂದ್ರ ಬಿಡುಗಡೆ ಮಾಡಿದರು. ಅವರು ರಾಗಿಣಿ ದ್ವಿವೇದಿ ಅವರ ಅಭಿನಯವನ್ನು ಶ್ಲಾಘಿಸಿದರು ಮತ್ತು ಅವರಿಗೆ ಶುಭ ಕೋರಿದರು. 

ಚಿತ್ರಕ್ಕೆ ಬಾಲು ನಾರಾಯಣನ್ ಆ್ಯಕ್ಷನ್ ಕಟ್ ಹೇಳಿದ್ದು, ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರದ ತಾರಾಬಳಗದಲ್ಲಿ ರಾಗಿಣಿ ದ್ವಿವೇದಿ ಅವರಲ್ಲದೆ, ಮಹೇಶ್ ನಾಯರ್, ಶೋಭರಾಜ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಚಿತ್ರಾ ಶೆಣೈ ಮತ್ತು ಆರತಿ ಗೋಪಾಲ್ ಕೂಡ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT