ಶೀಲ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ 
ಸಿನಿಮಾ ಸುದ್ದಿ

ರಾಗಿಣಿ ದ್ವಿವೇದಿ ಅಭಿನಯದ ಮಹಿಳಾ ಪ್ರಧಾನ ಸಿನಿಮಾ 'ಶೀಲ' ಬಿಡುಗಡೆಗೆ ದಿನಾಂಕ ಫಿಕ್ಸ್

'ಶೀಲ' ಎಂಬ ಶೀರ್ಷಿಕೆಯ ಸ್ತ್ರೀ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿದೆ. ಇದೀಗ ಕನ್ನಡದಲ್ಲಿ ರಾಜ್ಯದಲ್ಲಿ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಗಿಣಿ ದ್ವಿವೇದಿ ಅವರೀಗ ಸಾಲು ಸಾಲು ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟಿ ನಂದಕಿಶೋರ್ ಅವರ ಬಹುಭಾಷಾ ಸಿನಿಮಾ 'ವೃಷಭ' ಸಿನಿಮಾದಲ್ಲಿ ಮಲಯಾಳಂನ ಖ್ಯಾತ ನಟ ಮೋಹನ್‌ಲಾಲ್ ಅವರೊಂದಿಗೆ ನಟಿಸುತ್ತಿದ್ದಾರೆ. ಸದ್ಯ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಈಮಧ್ಯೆ, 'ಶೀಲ' ಎಂಬ ಶೀರ್ಷಿಕೆಯ ಸ್ತ್ರೀ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿದೆ. ಇದೀಗ ಕನ್ನಡದಲ್ಲಿ ಆಗಸ್ಟ್ 4 ರಂದು ರಾಜ್ಯದಲ್ಲಿ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದೊಂದು ಮಹಿಳಾ ಪ್ರದಾನ ಚಿತ್ರವಾಗಿದ್ದು, ಹೆಣ್ಣುಮಕ್ಕಳು ದಿನನಿತ್ಯದ ಬದುಕಿನಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಸುತ್ತ ಸುತ್ತುತ್ತದೆ. ಹೆಣ್ಣು ಮನಸ್ಸು ಮಾಡಿದರೆ ತನಗೆ ಎದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎನ್ನುತ್ತದೆ ಚಿತ್ರತಂಡ.

ಪ್ರಿಯಾಂಕಾ ಉಪೇಂದ್ರ ಮತ್ತು ರಾಗಿಣಿ ದ್ವಿವೇದಿ

ಚಿತ್ರದ ಟ್ರೇಲರ್ ಅನ್ನು ಪ್ರಿಯಾಂಕಾ ಉಪೇಂದ್ರ ಬಿಡುಗಡೆ ಮಾಡಿದರು. ಅವರು ರಾಗಿಣಿ ದ್ವಿವೇದಿ ಅವರ ಅಭಿನಯವನ್ನು ಶ್ಲಾಘಿಸಿದರು ಮತ್ತು ಅವರಿಗೆ ಶುಭ ಕೋರಿದರು. 

ಚಿತ್ರಕ್ಕೆ ಬಾಲು ನಾರಾಯಣನ್ ಆ್ಯಕ್ಷನ್ ಕಟ್ ಹೇಳಿದ್ದು, ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರದ ತಾರಾಬಳಗದಲ್ಲಿ ರಾಗಿಣಿ ದ್ವಿವೇದಿ ಅವರಲ್ಲದೆ, ಮಹೇಶ್ ನಾಯರ್, ಶೋಭರಾಜ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಚಿತ್ರಾ ಶೆಣೈ ಮತ್ತು ಆರತಿ ಗೋಪಾಲ್ ಕೂಡ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT