ನಟ ಮೋಹನ್ 
ಸಿನಿಮಾ ಸುದ್ದಿ

ಮದುರೈ: ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ!

80-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಮಧುರೈ: 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ವರದಿಗಳ ಪ್ರಕಾರ, 60 ವರ್ಷದ ನಟ ಮೋಹನ್ ಅವರು ತೀವ್ರ ಬಡತನಕ್ಕೆ ತುತ್ತಾಗಿದ್ದರು ಹಾಗೂ ಕೆಲಸ ಗಿಟ್ಟಿಸಲು ತೀವ್ರ ಒದ್ದಾಟ ಪಡುತ್ತಿದ್ದರು ಎಂದು ಹೇಳಲಾಗಿದೆ. ಅವರ ಪತ್ನಿಯು 10 ವರ್ಷಗಳ ಹಿಂದೆಯೇ ನಿಧನರಾಗಿದ್ದರು.

ಕಮಲ್‌ ಹಾಸನ್‌ ನಟನೆಯ ಸೂಪರ್‌ ಹಿಟ್‌ ಸಿನಿಮಾ ತಮಿಳಿನ ಅಪೂರ್ವ ಸಹೋದರ್‌ ಗಳ್‌ ಹಾಗೂ ನಾನ್‌ ಕಡವುಳ್ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಮೋಹನ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಅವರಿಗೆ ಅವಕಾಶಗಳ ಕೊರತೆಯಿಂದಾಗಿ ತೀವ್ರ ಬಡತನದಲ್ಲಿ ಜೀವನ ಸಾಗಿಸುತ್ತಿದ್ದರು. ಅಷ್ಟೇ ಅಲ್ಲ ನಟ ಮೋಹನ್‌ ತಿರುಪರಂಕುಂದ್ರಂನ ದೇವಸ್ಥಾನದ ಸಮೀಪ ಭಿಕ್ಷೆ ಬೇಡಿ ಜೀವನ ಕಳೆಯುತ್ತಿದ್ದರು ಎಂದು ವರದಿ ವಿವರಿಸಿದೆ.

‘ಆದಿಷ್ಯ ಮನಿದಿರ್ಗಳ್’ ಹಾಗೂ ಬಾಲಾ ನಿರ್ದೇಶನದ, ಆರ್ಯ ನಾಯಕತ್ವದ ‘ನಾನ್ ಕಡುವುಳ್’ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರ, ಅವರು ತಮಗೆ ನಟಿಸಲು ಯಾವುದೇ ಅವಕಾಶ ದೊರೆಯದೆ ಹೋಗಿದ್ದರಿಂದ, ತಮ್ಮ ತವರು ನಗರವನ್ನು ತೊರೆದು ಕೆಲವು ವರ್ಷಗಳ ಹಿಂದೆ ತಿರುಪರಂಕುಂದ್ರಂ ಗೆ ವಾಸ್ತವ್ಯ ಬದಲಿಸಿದ್ದರು.

ಅವರು ಹಣದ ಕೊರತೆಯಿಂದ ಮುಖ್ಯ ರಥಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದರು ಎಂದು ಹೇಳಲಾಗಿದೆ. ಜುಲೈ 31ರಂದು ಅವರು ಮೃತಪಟ್ಟ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿರುವ ಸ್ಥಳೀಯರು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಟ ಮೋಹನ್ ಗುರುತು ಸಿಗದಷ್ಟೂ ಕೊಳಕಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT