ನಟ ಮೋಹನ್ 
ಸಿನಿಮಾ ಸುದ್ದಿ

ಮದುರೈ: ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ!

80-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಮಧುರೈ: 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ವರದಿಗಳ ಪ್ರಕಾರ, 60 ವರ್ಷದ ನಟ ಮೋಹನ್ ಅವರು ತೀವ್ರ ಬಡತನಕ್ಕೆ ತುತ್ತಾಗಿದ್ದರು ಹಾಗೂ ಕೆಲಸ ಗಿಟ್ಟಿಸಲು ತೀವ್ರ ಒದ್ದಾಟ ಪಡುತ್ತಿದ್ದರು ಎಂದು ಹೇಳಲಾಗಿದೆ. ಅವರ ಪತ್ನಿಯು 10 ವರ್ಷಗಳ ಹಿಂದೆಯೇ ನಿಧನರಾಗಿದ್ದರು.

ಕಮಲ್‌ ಹಾಸನ್‌ ನಟನೆಯ ಸೂಪರ್‌ ಹಿಟ್‌ ಸಿನಿಮಾ ತಮಿಳಿನ ಅಪೂರ್ವ ಸಹೋದರ್‌ ಗಳ್‌ ಹಾಗೂ ನಾನ್‌ ಕಡವುಳ್ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಮೋಹನ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಅವರಿಗೆ ಅವಕಾಶಗಳ ಕೊರತೆಯಿಂದಾಗಿ ತೀವ್ರ ಬಡತನದಲ್ಲಿ ಜೀವನ ಸಾಗಿಸುತ್ತಿದ್ದರು. ಅಷ್ಟೇ ಅಲ್ಲ ನಟ ಮೋಹನ್‌ ತಿರುಪರಂಕುಂದ್ರಂನ ದೇವಸ್ಥಾನದ ಸಮೀಪ ಭಿಕ್ಷೆ ಬೇಡಿ ಜೀವನ ಕಳೆಯುತ್ತಿದ್ದರು ಎಂದು ವರದಿ ವಿವರಿಸಿದೆ.

‘ಆದಿಷ್ಯ ಮನಿದಿರ್ಗಳ್’ ಹಾಗೂ ಬಾಲಾ ನಿರ್ದೇಶನದ, ಆರ್ಯ ನಾಯಕತ್ವದ ‘ನಾನ್ ಕಡುವುಳ್’ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರ, ಅವರು ತಮಗೆ ನಟಿಸಲು ಯಾವುದೇ ಅವಕಾಶ ದೊರೆಯದೆ ಹೋಗಿದ್ದರಿಂದ, ತಮ್ಮ ತವರು ನಗರವನ್ನು ತೊರೆದು ಕೆಲವು ವರ್ಷಗಳ ಹಿಂದೆ ತಿರುಪರಂಕುಂದ್ರಂ ಗೆ ವಾಸ್ತವ್ಯ ಬದಲಿಸಿದ್ದರು.

ಅವರು ಹಣದ ಕೊರತೆಯಿಂದ ಮುಖ್ಯ ರಥಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದರು ಎಂದು ಹೇಳಲಾಗಿದೆ. ಜುಲೈ 31ರಂದು ಅವರು ಮೃತಪಟ್ಟ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿರುವ ಸ್ಥಳೀಯರು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಟ ಮೋಹನ್ ಗುರುತು ಸಿಗದಷ್ಟೂ ಕೊಳಕಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT