ಸ್ಪಂದನ-ವಿಜಯ ರಾಘವೇಂದ್ರ 
ಸಿನಿಮಾ ಸುದ್ದಿ

ನಾಳೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಬೆಂಗಳೂರು: ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಇಂದು ರಾತ್ರಿ 11 ಗಂಟೆ ಸುಮಾರಿಗೆ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಸಾಧ್ಯತೆ ಇದೆ. 12 ಗಂಟೆ ವೇಳೆಗೆ ಮಲ್ಲೇಶ್ವರಂನಲ್ಲಿರುವ ಅವರ ತಂದೆ ಮನೆ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಮನೆಗೆ ತಲುಪಲಿದೆ. ಬಳಿಕ ಮನೆಯ ಬಳಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನ ನಡೆಯಲಿದೆ.

ಇಂದು ಬೆಳಗ್ಗೆಯಿಂದಲೂ ಬ್ಯಾಂಕಾಕ್​ನಲ್ಲಿ ಒಂದಷ್ಟು ಕಾನೂನಾತ್ಮಕ ಪ್ರಕ್ರಿಯೆಗಳು ನಡೆಯುತ್ತಿವೆ. ಈಗಾಗಲೇ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಬಾಕಿ ಉಳಿದಿರುವ ಪ್ರಕ್ರಿಯೆಗಳು ಇಂದು ಮಧ್ಯಾಹ್ನದ ಒಳಗೆ ಮುಗಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕ ಸ್ಪಂದನಾ ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಸ್ಪಂದನಾ ಅವರ ಪೊಸ್ಟ್ ಮಾರ್ಟಂ ಮುಗಿದಿದೆ. ಥೈಲಾಂಟ್​ನಲ್ಲಿ ಒಂದು ಘಂಟೆಗೆ ಪ್ರೊಸಿಜರ್ ಮುಗಿಯಲಿದೆ. ಸಂಜೆ ಥೈ ಏರ್​ಲೈನ್ಸ್​ನಲ್ಲಿ ಮೃತದೇಹವನ್ನು ತರಲಾಗುವುದು. ರಾತ್ರಿ 11 ರ ವೇಳೆಗೆ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದೆ. ರಾತ್ರಿಯಿಂದ ನಾಳೆ ಮಧ್ಯಾಹ್ನದವರೆಗೂ ಮಲ್ಲೇಶ್ವರಂ ರಲ್ಲಿ ಅಂತಿಮನಮನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಮಧ್ಯಾಹ್ನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್​ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT