ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

D51: ಧನುಷ್ ನಟನೆಯ ಹೊಸ ತಮಿಳು ಸಿನಿಮಾಗೆ ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣ ನಾಯಕಿ!

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

ಧನುಷ್ ಅವರ 51ನೇ ಸಿನಿಮಾ 'ಡಿ51' ಅನ್ನು ಕಳೆದ ತಿಂಗಳು ನಟನ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಿಸಲಾಗಿತ್ತು.
ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮೂಲಕ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ಈ ಚಿತ್ರವನ್ನು ನಿರ್ಮಿಸಲಿದ್ದಾರೆ.

'ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನಟ ಧನುಷ್, ಶೇಖರ್ ಕಮ್ಮುಲ ಮತ್ತು ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಜೊತೆಗೆ ರಶ್ಮಿಕಾ ಇದೇ ಮೊದಲ ಬಾರಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ' ಎಂದು ಚಿತ್ರತಂಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಚಿತ್ರದ ಇನ್ನುಳಿದ ತಾರಾಗಣ ಮತ್ತು ತಾಂತ್ರಿಕ ಬಳಗದ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

ರಶ್ಮಿಕಾ ಈ ವರ್ಷದ ಆರಂಭದಲ್ಲಿ ನೆಟ್‌ಫ್ಲಿಕ್ಸ್‌ನ 'ಮಿಷನ್ ಮಜ್ನು' ಮೂಲಕ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

ರಶ್ಮಿಕಾ ಮಂದಣ್ಣ ಅಭಿನಯದ ರಣಬೀರ್ ಕಪೂರ್ ಜೊತೆಗಿನ 'ಅನಿಮಲ್' ಮತ್ತು ಅಲ್ಲು ಅರ್ಜುನ್ ಜೊತೆಗಿನ 'ಪುಷ್ಪ 2: ದಿ ರೂಲ್' ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ