ರಾಧನಾ ರಾಮ್ 
ಸಿನಿಮಾ ಸುದ್ದಿ

ಅದೃಷ್ಟಕ್ಕಾಗಿ ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ: ಕನಸಿನ ರಾಣಿ ಹೇಳಿದ್ದೇನು?

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರು: ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅದೇ ರೀತಿಯ ಈಗ ಮಾಲಾಶ್ರೀ ಅವರ ಮಗಳು ಕೂಡ ತಮ್ಮ ಹೆಸರನ್ನು ಚೇಂಜ್​ ಮಾಡಿಕೊಂಡಿದ್ದಾರೆ

ಆರಾಧನಾ

ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ  ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ.

ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೇ ಆರಾಧನಾ.  ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ಅವರು ವಿನಂತಿಸಿದ್ದಾರೆ.

ಹೆಸರು ಬದಲಾವಣೆ ಮಾಡಿಕೊಂಡಿರುವ ಆರಾಧನಾ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಈ ವಿಷಯ ತಿಳಿಸಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಾಧನಾ ರಾಮ. ಇಂದಿನಿಂದ ನನ್ನ ಹೆಸರು ಆರಾಧನಾ ಎಂದು ನಿಮಗೆ ಸುದ್ದಿ ನೀಡಲು ನಾನು ಬಯಸುತ್ತೇನೆ. ಈ ಬದಲಾವಣೆಗಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ನೀಡಬೇಕೆಂದು ನಾನು ಕೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು ಮತ್ತು ಇದು ಯಾವಾಗಲೂ ನನ್ನೊಂದಿಗೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT