ಶಂಕರ್ ಗುರು-ಧನಂಜಯ್ ಮತ್ತು ಅಣ್ಣ ಫ್ರಂ ಮೆಕ್ಸಿಕೋ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

'ಬಡವ ರಾಸ್ಕಲ್' ಬಳಿಕ ಶಂಕರ್ ಗುರು-ಧನಂಜಯ್ ಕಾಂಬಿನೇಶನ್‌ನಲ್ಲಿ 'ಅಣ್ಣ from Mexico' ಚಿತ್ರ ಘೋಷಣೆ 

ಬಡವ ರಾಸ್ಕಲ್ ಚಿತ್ರದ ಮೂಲಕ ಯಶಸ್ಸು ಕಂಡ ನಿರ್ದೇಶಕ ಹಾಗೂ ನಟ ಶಂಕರ್ ಗುರು ಮತ್ತು ನಟ ಧನಂಜಯ್ ಇದೀಗ ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಇದೀಗ, 'ಅಣ್ಣ from Mexico' ಎಂಬ ವಿಭಿನ್ನ ಶೀರ್ಷಿಕೆ ಹೊಂದಿರುವ ಕಾಮಿಡಿ ಮತ್ತು ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾ ಮೂಲಕ ಒಂದಾಗುತ್ತಿದ್ದಾರೆ. 

ಬಡವ ರಾಸ್ಕಲ್ ಚಿತ್ರದ ಮೂಲಕ ಯಶಸ್ಸು ಕಂಡ ನಿರ್ದೇಶಕ ಹಾಗೂ ನಟ ಶಂಕರ್ ಗುರು ಮತ್ತು ನಟ ಧನಂಜಯ್ ಇದೀಗ ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಇದೀಗ, 'ಅಣ್ಣ from Mexico' ಎಂಬ ವಿಭಿನ್ನ ಶೀರ್ಷಿಕೆ ಹೊಂದಿರುವ ಕಾಮಿಡಿ ಮತ್ತು ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾ ಮೂಲಕ ಒಂದಾಗುತ್ತಿದ್ದಾರೆ. 

ಆಗಸ್ಟ್ 23ರ ಮಧ್ಯರಾತ್ರಿ ಧನಂಜಯ್ ಅವರ ಜನ್ಮದಿನದಂದು ಈ ಸಿನಿಮಾ ಕುರಿತು ಅಧಿಕೃತ ಘೋಷಣೆ ಮಾಡಲಾಗಿದೆ. 2021ರಲ್ಲಿ ತೆರೆಗೆ ಬಂದಿದ್ದ ಬಡವ ರಾಸ್ಕರ್ ಸಿನಿಮಾ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದ ಧನಂಜಯ್ ಅವರು ತಮ್ಮದೇ ಡಾಲಿ ಪಿಕ್ಚರ್ಸ್ ಅಡಿ ಸಿನಿಮಾವನ್ನು ನಿರ್ಮಿಸಿದ್ದರು.

ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದ್ದು, ಧನಂಜಯ್ ಅವರು ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪದಕ ಧರಿಸಿ, ವಿಚಿತ್ರ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 

'ನಾನು ಯಾವಾಗಲೂ ಧನಂಜಯ್‌ನನ್ನು ಹೆಚ್ಚು ಮಾಸ್-ಓರಿಯೆಂಟೆಡ್ ಲುಕ್‌ನಲ್ಲಿ ಪ್ರಸ್ತುತಪಡಿಸಲು ಬಯಸುತ್ತೇನೆ ಮತ್ತು ಈ ಕಂಟೆಂಟ್ ಅದಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳುತ್ತದೆ' ಎಂದು ಈ ವರ್ಷದಲ್ಲಿ ಚಿತ್ರೀಕರಣ ಪ್ರಾರಂಭಿಸಲು ಸಜ್ಜಾಗುತ್ತಿರುವ ಶಂಕರ್ ಗುರು ಹೇಳುತ್ತಾರೆ.

ಚಿತ್ರದಲ್ಲಿ ನಟರಾದ ನಾಗಭೂಷಣ ಮತ್ತು ಪೂರ್ಣಚಂದ್ರ ಮೈಸೂರು ನಟಿಸಲಿದ್ದು, ಬಡವ ರಾಸ್ಕಲ್ ಚಿತ್ರದಲ್ಲಿ ಧನಂಜಯ್ ಅವರೊಂದಿಗೆ ಕೆಲಸ ಮಾಡಿದ್ದ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಕೂಡ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರೆ. 

ದಿ ರಾಯಲ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ ನಿರ್ಮಿಸಿರುವ ಈ ಚಿತ್ರಕ್ಕೆ 'ಮಾನ್ಸೂನ್ ರಾಗ' ಸಿನಿಮಾ ಖ್ಯಾತಿಯ ಎಸ್‌ಕೆ ರಾವ್ ಛಾಯಾಗ್ರಹಣ ಮಾಡಲಿದ್ದಾರೆ. 

ಕಥೆಯು ಪ್ರಧಾನವಾಗಿ ಕರ್ನಾಟಕದ ಹಳ್ಳಿಯೊಂದರಲ್ಲಿ ನಡೆಯುತ್ತದೆ. ಅಲ್ಲದೆ, ಚಿತ್ರದ ನಿರೂಪಣೆಯ ಪ್ರಮುಖ ದೃಶ್ಯಗಳು ಮೆಕ್ಸಿಕೋದಲ್ಲಿ ಸಂಭವಿಸುತ್ತವೆ. ಮೆಕ್ಸಿಕೋದಲ್ಲೂ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇದಲ್ಲದೇ ಪರಮ್ ನಿರ್ದೇಶನದ ಸಿನಿಮಾದಲ್ಲಿ ಧನಂಜಯ್ ನಟಿಸಲಿದ್ದು, ಇದು ಸದ್ಯ ನಿರ್ಮಾಣ ಹಂತದಲ್ಲಿದೆ. ರೋಹಿತ್ ಪದಕಿ ನಿರ್ದೇಶಿಸಿರುವ, ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದ ಟೀಸರ್ ಕೂಡ ಬಿಡುಗಡೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT