ಸಂಸದೆ ಸುಮಲತಾ ಹುಟ್ಟುಹಬ್ಬ ಪಾರ್ಟಿಯಲ್ಲಿ ವೇದಿಕೆಯಲ್ಲಿ ಕಿಚ್ಚ ಸುದೀಪ್ ಮತ್ತು ದರ್ಶನ್ 
ಸಿನಿಮಾ ಸುದ್ದಿ

ಹಳೆ ಮುನಿಸು ಮರೆತು ಮತ್ತೆ ಒಂದಾದರೇ ಕಿಚ್ಚ ಸುದೀಪ್-ದರ್ಶನ್?: ಸಂಸದೆ ಸುಮಲತಾ ಹುಟ್ಟುಹಬ್ಬ ಪಾರ್ಟಿಯಲ್ಲಿ ಇಬ್ಬರು ಮುಖಾಮುಖಿ

ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್(Kichcha Sudeep) ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging star Darshan) ಅಭಿಮಾನಿಗಳಿಗೆ ಇದು ಖುಷಿಯ ಸಂಗತಿ ಎನ್ನಬಹುದು. ಈ ಇಬ್ಬರು ನಾಯಕ ನಟರು ಕೆಲವು ವೈಯಕ್ತಿಕ ಕಾರಣಗಳಿಂದ ಆರು ವರ್ಷಗಳ ಹಿಂದೆ ಮುನಿಸಿಕೊಂಡು ದೂರವಾಗಿದ್ದರು. 

ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್(Kichcha Sudeep) ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging star Darshan) ಅಭಿಮಾನಿಗಳಿಗೆ ಇದು ಖುಷಿಯ ಸಂಗತಿ ಎನ್ನಬಹುದು. ಈ ಇಬ್ಬರು ನಾಯಕ ನಟರು ಕೆಲವು ವೈಯಕ್ತಿಕ ಕಾರಣಗಳಿಂದ ಆರು ವರ್ಷಗಳ ಹಿಂದೆ ಮುನಿಸಿಕೊಂಡು ದೂರವಾಗಿದ್ದರು. 

ಎಷ್ಟರ ಮಟ್ಟಿಗೆ ಎಂದರೆ ಯಾವುದೇ ಕಾರ್ಯಕ್ರಮಗಳಲ್ಲಿ ಕೂಡ ಪರಸ್ಪರ ಮುಖಾಮುಖಿಯಾಗುತ್ತಿರಲಿಲ್ಲ. ಒಬ್ಬರ ಬಗ್ಗೆ ಮತ್ತೊಬ್ಬರು ಬಹಿರಂಗವಾಗಿ ಪ್ರತಿಕ್ರಿಯೆ ನೀಡುವುದಾಗಲಿ, ಮಾತನಾಡುವುದು ಕೂಡ ಮಾಡುತ್ತಿರಲಿಲ್ಲ. ಆದರೆ ನಿನ್ನೆ ನಡೆದ ಬೆಳವಣಿಗೆ ಇಬ್ಬರ ಸಿನಿವೃತ್ತಿಗೆ, ವೈಯಕ್ತಿಕ ಜೀವನಕ್ಕೆ ಮತ್ತು ಸ್ಯಾಂಡಲ್ ವುಡ್ ಪಾಲಿಗೂ ಉತ್ತಮ ಬೆಳವಣಿಗೆ ಎನ್ನಬಹುದು.

ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಅವರ 60ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮ ಸಂಭ್ರಮದಿಂದ ನಡೆದಿತ್ತು. ಅದರಲ್ಲಿ ದರ್ಶನ್ ಮತ್ತು ಕಿಚ್ಚ ಸುದೀಪ್ ಇಬ್ಬರೂ ಕಾಣಿಸಿಕೊಂಡಿದ್ದಾರೆ. ಸುಮಲತಾ ಮಧ್ಯಸ್ಥಿಕೆಯಲ್ಲಿ ರಾಕ್ ಲೈನ್ ವೆಂಕಟೇಶ್ ಮುಂದಾಳತ್ವದಲ್ಲಿ ಇಬ್ಬರ ಮಧ್ಯೆ ರಾಜಿ ಸಂಧಾನ ನಡೆದಿತ್ತಾ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ.

ಸುಮಲತಾ ಅವರೇ ಸಂಧಾನ ಮಾಡಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದ್ದು ಅದಕ್ಕೆ ಪೂರಕವೆಂಬಂತೆ ಪಾರ್ಟಿಯಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದ ವಿಡಿಯೋಗಳೂ, ಫೋಟೋಗಳು ಇಂದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!