ಪ್ರಶಾಂತ್ ನೀಲ್ 
ಸಿನಿಮಾ ಸುದ್ದಿ

ಕೆಜಿಎಫ್ ಮತ್ತು ಸಲಾರ್ ಕಥೆಗಳ ನಡುವೆ ಸಂಪರ್ಕ; ಪ್ರಶಾಂತ್ ನೀಲ್ ಕೈಚಳಕದ ಬಗ್ಗೆ ಗರಿಗೆದರಿದ ನಿರೀಕ್ಷೆ

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ 'ಸಲಾರ್' ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಈ ಹೈಬಜೆಟ್ ಆ್ಯಕ್ಷನ್ ಥ್ರಿಲ್ಲರ್ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಶಾಂತ್ ಮತ್ತು ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. 

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ 'ಸಲಾರ್' ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಈ ಹೈಬಜೆಟ್ ಆ್ಯಕ್ಷನ್ ಥ್ರಿಲ್ಲರ್ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಶಾಂತ್ ಮತ್ತು ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಟ್ರೇಲರ್‌ ಮತ್ತು ಅವರ ಪ್ರಚಾರದ ಕಾರ್ಯತಂತ್ರದ ಕುರಿತು ಶೀಘ್ರದಲ್ಲೇ ಮಾಹಿತಿ ಹೊರಬೀಳುವ ನಿರೀಕ್ಷೆ ವ್ಯಕ್ತವಾಗಿದೆ.

ಸದ್ಯದ ವಿಚಾರ ಏನೆಂದರೆ, ಪ್ರಶಾಂತ್ ನೀಲ್ ಅವರ ಹಿಂದಿನ ಬಿಗ್-ಬ್ಲಾಕ್‌ಬಸ್ಟರ್ ಸಿನಿಮಾ ಕೆಜಿಎಫ್‌ ಹಾಗೂ ಸಲಾರ್ ಚಿತ್ರಕ್ಕೂ ಒಂದಕ್ಕೊಂದು ಸಂಪರ್ಕ ಹೊಂದಿರಬಹುದು ಎನ್ನಲಾಗಿದೆ. ಕೆಜಿಎಫ್ ಮತ್ತು ಸಲಾರ್ ಎರಡನ್ನೂ ಎರಡು ಭಾಗಗಳಾಗಿ ಪರಿಗಣಿಸಿರುವ ಪ್ರಶಾಂತ್ ನೀಲ್, ಈ ಎರಡು ಚಲನಚಿತ್ರಗಳನ್ನು ಹೇಗೆ ಒಂದಕ್ಕೊಂದು ಸಂಪರ್ಕ ಹೊಂದಿರುವಂತೆ ಮಾಡುತ್ತಾರೆ ಎನ್ನುವುದು ಇದೀಗ ಆಸಕ್ತಿದಾಯಕ ವಿಚಾರವಾಗಿದೆ. ಮೂಲಗಳ ಪ್ರಕಾರ, ಕೆಜಿಎಫ್ 3 ಕೆಲಸ ಶುರುವಾಗಿದೆ ಎಂದಿದ್ದರೂ, ಎಲ್ಲರ ಕಣ್ಣುಗಳು ಈಗ ಸಲಾರ್ ಮೇಲೆ ನೆಟ್ಟಿದೆ. ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಸಹ ನಟಿಸಿದ್ದಾರೆ.

ಸಲಾರ್ ಮತ್ತು ಕೆಜಿಎಫ್ ಚಿತ್ರಗಳಿಗೆ ಸಂಪರ್ಕ ಕಲ್ಪಿಸುವ ಕುರಿತು ಹಲವು ಊಹಾಪೋಹಗಳು ಈಗಾಗಲೇ ಹರಿದಾಡುತ್ತಿವೆ. ಸಲಾರ್ ಚಿತ್ರದಲ್ಲಿನ ಘಟನೆಗಳು ಕೆಜಿಎಫ್ ಅಧ್ಯಾಯ 2ರ ಘಟನೆಗಳೊಂದಿಗೆ ಏಕಕಾಲದಲ್ಲೇ ನಡೆಯುತ್ತವೆ ಎಂದು ಒಂದು ಮೂಲಗಳು ತಿಳಿಸಿದ್ದರೆ, ಕೆಜಿಎಫ್-3 ಸಿನಿಮಾವು ಸಲಾರ್-2 ಸಿನಿಮಾದೊಂದಿಗಿನ ಘಟನೆಗಳೊಂದಿಗೆ ಸಂಬಂಧ ಹೊಂದಿವೆ ಎಂದು ಹೇಳಲಾಗುತ್ತಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ ಚಿತ್ರರಂಗವನ್ನು ಪರಿಚಯಿಸಿದ ಮತ್ತು ನಟ ಯಶ್ ಮತ್ತು ಪ್ರಶಾಂತ್ ನೀಲ್ ಅವರನ್ನು ಮನೆಮಾತಾಗುವಂತೆ ಮಾಡಿದ ಕೆಜಿಎಫ್ ಯಶಸ್ಸಿನ ನಂತರ ಸಲಾರ್ ಸಿನಿಮಾ ಮೇಲಿನ ನಿರೀಕ್ಷೆ ಗಗನಕ್ಕೇರಿದೆ. ಪ್ರಶಾಂತ್ ನೀಲ್ ಅವರು ‘ಕೆಜಿಎಫ್ 3’ ನಿರ್ದೇಶನ ಮಾಡಲಿದ್ದಾರೆ ಎಂಬುದು ‘ಕೆಜಿಎಫ್ 2’ ಕ್ಲೈಮ್ಯಾಕ್ಸ್​​ನಲ್ಲಿ ರಿವೀಲ್ ಆಗಿತ್ತು.
ಹೀಗಾಗಿ, ಪ್ರಶಾಂತ್ ನೀಲ್ ಅವರು ಸಲಾರ್ ಮತ್ತು ಕೆಜಿಎಫ್ ಸಿನಿಮಾಗಳ ನಡುವೆ ಹೇಗೆ ಸಂಪರ್ಕ ಸಾಧಿಸುವಂತೆ ನೋಡಿಕೊಳ್ಳುತ್ತಾರೆ ಎಂಬುದು ಇದೀಗ ವ್ಯಾಪಕ ನಿರೀಕ್ಷೆಯನ್ನು ಹುಟ್ಟುಹಾಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT