ಶ್ರುತಿ ಹಾಸನ್ 
ಸಿನಿಮಾ ಸುದ್ದಿ

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರಕ್ಕೆ ಕನ್ನಡ ಸೇರಿ ಐದು ಭಾಷೆಗಳಿಗೂ ಡಬ್ ಮಾಡಿದ ಶ್ರುತಿ ಹಾಸನ್!

ಬಹುನಿರೀಕ್ಷಿತ ಮುಂಬರುವ ಸಲಾರ್ ಚಿತ್ರಕ್ಕೆ ನಟಿ ಶ್ರುತಿ ಹಾಸನ್ ತಮ್ಮ ಪಾತ್ರಕ್ಕೆ ಐದು ಭಾಷೆಗಳಲ್ಲಿಯೂ ತಮ್ಮದೇ ಧ್ವನಿ ನೀಡಿದ್ದಾರೆ. ತಮ್ಮ ಮಾತೃಭಾಷೆ ತಮಿಳಿನಲ್ಲಿ ಡಬ್ಬಿಂಗ್ ಮಾಡುವುದರ ಜೊತೆಗೆ, ನಟಿ ಮತ್ತು ಗಾಯಕಿ ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ತಾವೇ ಡಬ್ ಮಾಡಿದ್ದಾರೆ.

ಬಹುನಿರೀಕ್ಷಿತ ಮುಂಬರುವ ಸಲಾರ್ ಚಿತ್ರಕ್ಕೆ ನಟಿ ಶ್ರುತಿ ಹಾಸನ್ ತಮ್ಮ ಪಾತ್ರಕ್ಕೆ ಐದು ಭಾಷೆಗಳಲ್ಲಿಯೂ ತಮ್ಮದೇ ಧ್ವನಿ ನೀಡಿದ್ದಾರೆ. ತಮ್ಮ ಮಾತೃಭಾಷೆ ತಮಿಳಿನಲ್ಲಿ ಡಬ್ಬಿಂಗ್ ಮಾಡುವುದರ ಜೊತೆಗೆ, ನಟಿ ಮತ್ತು ಗಾಯಕಿ ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ತಾವೇ ಡಬ್ ಮಾಡಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ. ಸಲಾರ್ ಈ ವರ್ಷ ಸೆಪ್ಟೆಂಬರ್ 28ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಚಿತ್ರದಲ್ಲಿ ಪೃಥ್ವಿರಾಜ್, ಜಗಪತಿ ಬಾಬು, ಈಶ್ವರಿ ರಾವ್ ಮತ್ತು ಮಧು ಗುರುಸ್ವಾಮಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಲಾರ್ ಚಿತ್ರಕ್ಕೆ ಭುವನ್ ಗೌಡ ಅವರ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಅವರ ಸಂಕಲನ ಮತ್ತು ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆ ಇದೆ. ಕೆಜಿಎಫ್ 1 ಮತ್ತು 2 ಹಾಗೂ ಕಾಂತಾರ ಸಿನಿಮಾಗಳ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್ ಈ ಚಿತ್ರಕ್ಕೆ ಬೆಂಬಲ ನೀಡಿದೆ.

ಈಮಧ್ಯೆ, ಶ್ರುತಿ ಹಾಸನ್ ಅವರು 'ದಿ ಐ' ಎಂಬ ಅಂತರರಾಷ್ಟ್ರೀಯ ಚಲನಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಅವರು ವಿಧವೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಗ್ರೀಕ್ ದ್ವೀಪಕ್ಕೆ ತನ್ನ ಮೃತ ಪತಿಯ ಚಿತಾಭಸ್ಮವನ್ನು ಹರಡುತ್ತಾರೆ. ಅವರು ಶೋರ್ಯುವ್ ನಿರ್ದೇಶನದ 'ನಾನಿ30' ಚಿತ್ರದ ಭಾಗವೂ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT