ಯಶ್ 
ಸಿನಿಮಾ ಸುದ್ದಿ

2 ವರ್ಷಗಳಿಂದ ಕಾಯ್ದಿದ್ದ ಯಶ್ ಅಭಿಮಾನಿಗಳಿಗೆ ಗುಡ್ ​ನ್ಯೂಸ್: ಡಿಸೆಂಬರ್ 8ರಂದು ಹೊಸ ಸಿನಿಮಾ ಶೀರ್ಷಿಕೆ ಅನೌನ್ಸ್!

ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.  2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು.

ರಾಕಿಂಗ್​ ಸ್ಟಾರ್​ ಯಶ್​ ಕೆಜಿಎಫ್​ ಬಳಿಕ ಹೊಸದೊಂದು ಸಿನಿಮಾದಲ್ಲಿ ಮಗ್ನರಾಗಿದ್ದಾರೆ ಎಂಬುದು ಬಹುತೇಕರಿಗೆ ಗೊತ್ತಿತ್ತು. ಆದರೆ ಅದು ಯಾವಾಗ ಬರುತ್ತೆ? ಯಶ್​ ಮತ್ತೆ ಸ್ಕ್ರೀನ್​ ಮೇಲೆ ಅಬ್ಬರಿಸೋದು ಯಾವಾಗ? ಎಂಬುದು ಅಭಿಮಾನಿಗಳ ಕುತೂಹಲತೆಗೆ ಕಾರಣವಾಗಿತ್ತು. ಆದರೀಗ ಅದಕ್ಕೆ ದಿನ ನಿಗದಿಯಾಗಿದೆ. ಇದೇ ವಾರ ಅಭಿಮಾನಿಗಳಿಗೆ ರಾಕಿಭಾಯ್​ ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ.

ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.  2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು. ಇದಾದ ಬಳಿಕ ಯಶ್ ಅವರ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಮೂಡಿತ್ತು. ಆದರೆ, ಹೊಸ ಸಿನಿಮಾ ಕುರಿತು ಇತ್ತೀಚೆಗೆ ಮಾತನಾಡಿದ್ದ ಅವರು, ಶೀಘ್ರವೇ ಮಾಹಿತಿ ನೀಡುವುದಾಗಿ ಹೇಳಿದ್ದರು. ಇದೀಗ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ಈಗ ಸಮಯ ಬಂದಿದೆ. ಡಿಸೆಂಬರ್ 8ರಂದು ಮುಂಜಾನೆ 9:55ಕ್ಕೆ ಟೈಟಲ್ ಅನೌನ್ಸ್ ಆಗಲಿದೆ’ ಎಂದು ‘ಟ್ವಿಟ್ಟರ್ ’ನಲ್ಲಿ ಯಶ್ ಪೋಸ್ಟ್‌ ಮಾಡಿದ್ದಾರೆ. ಈ ಚಿತ್ರವನ್ನು ಕೆವಿಎನ್​ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಈ ಪೋಸ್ಟರ್​ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

‘ಯಶ್ 19’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಹಾಲಿವುಡ್ ತಂತ್ರಜ್ಞರು ಕೂಡ ಈ ಚಿತ್ರಕ್ಕಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಎಲ್ಲಾ ಪ್ರಶ್ನೆಗೆ ಡಿ.8ರಂದು ಉತ್ತರ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT