ಅಪೂರ್ವ - ಓ ನನ್ನ ಚೇತನ ಸ್ಟಿಲ್ 
ಸಿನಿಮಾ ಸುದ್ದಿ

'ಓ ನನ್ನ ಚೇತನ' ಚಿತ್ರದ ಮೂಲಕ ನಟಿ ಅಪೂರ್ವ ನಿರ್ದೇಶನಕ್ಕೆ ಪದಾರ್ಪಣೆ

ಕ್ರೇಜಿಸ್ಟಾರ್ ರವಿಚಂದ್ರನ್‌ ನಟಿಸಿ, ನಿರ್ದೇಶಿಸಿದ್ದ 'ಅಪೂರ್ವ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ನಟಿ ಅಪೂರ್ವ, ಸ್ಯಾಂಡಲ್​ವುಡ್​ನಲ್ಲಿ ಆ ಹೆಸರಿನಿಂದಲೇ ಫೇಮಸ್ ಆದರು. ನಟಿ ಇದೀಗ 'ಓ ನನ್ನ ಚೇತನ' ಎಂಬ ಮಕ್ಕಳ ಸಿನಿಮಾ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

ಕ್ರೇಜಿಸ್ಟಾರ್ ರವಿಚಂದ್ರನ್‌ ನಟಿಸಿ, ನಿರ್ದೇಶಿಸಿದ್ದ 'ಅಪೂರ್ವ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ನಟಿ ಅಪೂರ್ವ, ಸ್ಯಾಂಡಲ್​ವುಡ್​ನಲ್ಲಿ ಆ ಹೆಸರಿನಿಂದಲೇ ಫೇಮಸ್ ಆದರು. ನಟಿ ಇದೀಗ 'ಓ ನನ್ನ ಚೇತನ' ಎಂಬ ಮಕ್ಕಳ ಸಿನಿಮಾ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು 'ಅಲೆಮಾರಿ' ಸಿನಿಮಾ ಖ್ಯಾತಿಯ ನಿರ್ದೇಶಕ ಹರಿ ಸಂತೋಷ್ ಬರೆದಿದ್ದಾರೆ.

ಡಿಸೆಂಬರ್‌ನಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜಿಸಿರುವ ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಆಲ್ಬಮ್ ಮತ್ತು ಶೀರ್ಷಿಕೆ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಇದು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ.

ಎಸ್ & ಎಸ್ ಬ್ಯಾನರ್ ನಿರ್ಮಿಸಿರುವ ಓ ನನ್ನ ಚೇತನ ಸನಿಮಾ ಮಕ್ಕಳ ಮೊಬೈಲ್ ಚಟಗಳ ಕುರಿತಾದ ಕಥೆಯನ್ನು ಹೊಂದಿದೆ ಮತ್ತು ಭವಿಷ್ಯದ ಪೀಳಿಗೆಯ ಬಗ್ಗೆ ಎಚ್ಚರಿಕೆ ನೀಡುತ್ತದೆ. ಹೆಚ್ಚಾಗಿ ಹೊಸಬರನ್ನು ಒಳಗೊಂಡಿರುವ ಈ ಚಿತ್ರವು ಪ್ರಸಿದ್ಧ ತಂತ್ರಜ್ಞರನ್ನು ಒಳಗೊಂಡಿದೆ. ಚಿತ್ರಕ್ಕೆ ಪ್ರದೀಪ್ ವರ್ಮಾ ಅವರ ಸಂಗೀತ ಸಂಯೋಜನೆಯಿದ್ದು, ಗುರು ಪ್ರಶಾಂತ್ ಅವರ ಛಾಯಾಗ್ರಹಣ ಮತ್ತು ಕೆಎಂ ಪ್ರಕಾಶ್ ಅವರ ಸಂಕಲನವಿದೆ.

ಓ ನನ್ನ ಚೇತನ ಚಿತ್ರದಲ್ಲಿ ಪ್ರತೀಕ್, ಪೃಥನ್, ಬೇಬಿ ದಾನೇಶ್ವರಿ, ಡಿಂಪನಾ ಮತ್ತು ಮೋನಿಕಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT