ಸುರೇಶ್ ಕೊಂಡೇಟಿ 
ಸಿನಿಮಾ ಸುದ್ದಿ

ಗೋವಾದಲ್ಲಿ ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಕಲಾವಿದರಿಗೆ ಅವಮಾನ: ಕ್ಷಮೆಯಾಚಿಸಿದ ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ

ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ಕಲಾವಿದರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್‌.

ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ಕಲಾವಿದರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್‌.

ಗೋವಾದಲ್ಲಿ ಬಂದಂತಹ ಅತಿಥಿಗಳಿಗೆ ಸರಿಯಾದ ಆತಿಥ್ಯ ನೀಡದೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ರಾಂತಿ ಸಿನಿಮಾಗೆ ಅವಾರ್ಡ್ ನೀಡುತ್ತಿದ್ದಂತೆ ವೇದಿಕೆಯಲ್ಲಿ ಕರೆಂಟ್ ಆಫ್ ಕೂಡ ಆಗಿದ್ದು, ಆಯೋಜನೆಯಲ್ಲಿ ಮಹಾ ಎಡವಟ್ಟು ಸಂಭವಿಸಿದೆ.

ಕನ್ನಡಿಗರಿಗೆ ತೆಲುಗು ಆಯೋಜಕರಿಂದ ಈ ರೀತಿ ಮೋಸವಾಗಿರುವ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡಿ ಬೆಂಗಳೂರಿಗೆ ಕನ್ನಡದ ಸ್ಟಾರ್ಸ್‌ ತೆರಳಿದ್ದಾರೆ. ರಮೇಶ್ ಅರವಿಂದ್, ಸಪ್ತಮಿ ಗೌಡ, ರಾಜವರ್ಧನ್, ಬಿ ಸುರೇಶ್, ಶೈಲಜಾ ನಾಗ್ ಸೇರಿದಂತೆ ಸುಮಾರು 30ರಿಂದ 35 ಮಂದಿ ಕನ್ನಡದ ಸ್ಟಾರ್ಸ್‌ಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ಗೋವಾದಲ್ಲಿ ನಡೆದ ಸಂತೋಷಂ ಅವಾರ್ಡ್ಸ್ ಫಂಕ್ಷನ್ ನಲ್ಲಿ ಕನ್ನಡ ತಾರೆಯರಿಗೆ ಅವಮಾನವಾಗಿದ್ದು, ಅಲ್ಲಿ ಆದಂತಹ ಎಡವಟ್ಟುಗಳಿಗೆ ಆಯೋಜಕ ಸುರೇಶ್ ಕೊಂಡೇಟಿ ಕ್ಷಮೆ ಕೇಳಿದ್ದಾರೆ‌. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 1,200 ಮಂದಿ ಸೆಲೆಬ್ರಿಟೀಸ್​ಗೆ ಸ್ ಗೆ ಆತಿಥ್ಯ ನೀಡೋದ್ರಲ್ಲಿ ಏರುಪೇರಾಗಿದೆ. ಇದು ಉದ್ದೇಶಪೂರ್ವಕವಾಗಿ ಆಗಿರೋದಲ್ಲ. ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ನನಗೆ ನಾಲ್ಕು ಚಿತ್ರರಂಗದ ತಾರೆಯರೆಲ್ಲಾ ಒಂದೇ. ಅದರಲ್ಲಿ ಯಾವುದೇ ತಾರತಮ್ಯ ಇಲ್ಲ. ಕಂಪ್ಲೀಟ್ ಆಗಿ ಇದು ನಾನೊಬ್ಬನೇ ನೀಡ್ತಾ ಬರ್ತಿರೋ ಪ್ರಶಸ್ತಿ ಪ್ರದಾನ ಸಮಾರಂಭ.‌ಇದಕ್ಕೂ ತೆಲುಗು ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನಿಂದ ತೊಂದರೆಗೊಳಗಾದ ಪ್ರತಿಯೊಬ್ಬರಿಗೂ ಕ್ಷಮೆಯಾಚಿಸುತ್ತೇನೆ ಎಂದು ಸುರೇಶ್ ಕೊಂಡೇಟಿ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT