ಕೆಮಿಕಲ್ ನೀರು ಕಣ್ಣಿಗೆ ತಾಕಿ ಒದ್ದಾಡುತ್ತಿರುವ ಸಂಗೀತಾ ಹಾಗೂ ಪ್ರತಾಪ್. 
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ 10: ಟಾಸ್ಕ್ ವೇಳೆ ಕೆಮಿಕಲ್ ನೀರು ಹಾಕಿ ಸ್ಪರ್ಧಿಗಳ ಅತಿರೇಕದ ವರ್ತನೆ, ಮನೆಯಿಂದ ಹೊರಬಂದ್ರಾ ಪ್ರತಾಪ್, ಸಂಗೀತಾ?

ಬಿಗ್ ಬಾಸ್ ಕನ್ನಡ ಸೀಸನ್ 10' ಶೋನಲ್ಲಿ ಟಾಸ್ಕ್ ಆಡುವಾಗ ಗಾಯ ಆಗಿ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಅವರು ಆಸ್ಪತ್ರೆ ಸೇರಿದ್ದಾರೆಂದು ಹೇಳಲಾಗುತ್ತಿದೆ.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10' ಶೋನಲ್ಲಿ ಟಾಸ್ಕ್ ಆಡುವಾಗ ಗಾಯ ಆಗಿ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಅವರು ಆಸ್ಪತ್ರೆ ಸೇರಿದ್ದಾರೆಂದು ಹೇಳಲಾಗುತ್ತಿದೆ.

ಬಿಗ್‌ಬಾಸ್‌ ಮನೆಯೊಳಗೆ ಬಿಗ್‌ಬಾಸ್‌ ಲೋಕ ಆಟದಲ್ಲಿ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಟಾಸ್ಕ್ ವೇಳೆ ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆದಿದೆ.

ಟಾಸ್ಕ್ ವೇಳೆ ಹಲವರು ಟಾರ್ಗೆಟ್ ಮಾಡಿಕೊಂಡು ಆಟ ಆಡಿದ್ದು ಕಂಡು ಬಂದಿದೆ. ಅದರಲ್ಲೂ ಸಂಗೀತಾ ಮತ್ತು ವಿನಯ್ ಮಧ್ಯೆ, ಕಾರ್ತಿಕ್ ಮತ್ತು ವಿನಯ್ ಮಧ್ಯೆ, ಸಂಗೀತಾ ಮತ್ತು ನಮ್ರತಾ ಮಧ್ಯೆ ವೈಮನಸ್ಸು ಮೂಡಿದ್ದು, ವೈಯಕ್ತಿಕವಾಗಿ ಆಟಗಳನ್ನು ಆಡುತ್ತಿದ್ದಾರೆ.

ಈ ಟಾಸ್ಕ್‌ನಲ್ಲಿ ಒಬ್ಬರಿಗೊಬ್ಬರು ಕೆಣಕಿಕೊಳ್ಳುತ್ತಿದ್ದು, ಇದರಿಂದ ಮನೆಯಲ್ಲಿ ಅನಾಹುತ ಆಗಬಹುದು ಎಂದು ಅಂದಾಜಿಸಲಾಗಿತ್ತು. ಅದೇ ರೀತಿಯೇ ಆಗಿದೆ.

ಟಾಸ್ಕ್ ವೊಂದರಲ್ಲಿ ಅವರ ಸಂಗೀತಾ ಹಾಗೂ ಡ್ರೋಣ್ ಪ್ರತಾಪ್ ಅವರ ಮುಖಕ್ಕೆ ಅತಿಯಾಗಿ ಕೆಮಿಕಲ್ ನೀರು ಹಾಕಿದ ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ. ಇದರಿಂದ ದಿಢೀರ್ ನೆ ಡ್ರೋನ್ ಪ್ರತಾಪ್ ಮತ್ತು ಸಂಗೀತಾ ಮನೆಯಿಂದ ಹೊರ ಬಂದಿದ್ದಾರೆಂದು ತಿಳಿದುಬಂದಿದೆ.

ಈ ವಿಷಯದ ಕುರಿತಂತೆ ಚಾನೆಲ್‌ನವರಾಗಲೇ ಅಥವಾ ಬಿಗ್‌ಬಾಸ್‌ ಶೋಗೆ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಸಂಗೀತಾ ಹಾಗೂ ಡ್ರೋನ್‌ ಪ್ರತಾಪ್‌ ಬಿಗ್‌ಬಾಸ್‌ ಮನೆಯಿಂದ ಹೊರಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂಬ ಮಾಹಿತಿ ಸುದ್ದಿ ಸಾಮಾಜಿಕ ಜಾಲತಾಣಘಳಲ್ಲಿ ವೈರಲ್ ಆಗಿದೆ.

ಜಿಯೋ ಸಿನಿಮಾ ಆಪ್‌ ಲೈವ್‌ನಲ್ಲಿ ಎಲ್ಲಾ ಸ್ಪರ್ಧಿಗಳು ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಡ್ರೋನ್ ಪ್ರತಾಪ್, ಸಂಗೀತಾ ಮಾತ್ರ ಕಾಣಿಸುತ್ತಿಲ್ಲ. ಇನ್ನು ಈ ಲೈವ್‌ನಲ್ಲಿ ಆಗಾಗ ಅಡಿಯೋ ಸಮಸ್ಯೆ ಆಗುತ್ತಿರುತ್ತದೆ. ಹಾಗಾಗಿ ಸ್ಪರ್ಧಿಗಳು ಪ್ರತಾಪ್, ಸಂಗೀತಾ ಬಗ್ಗೆ ಮಾತನಾಡಿದ್ದಾರೋ ಇಲ್ಲವೋ ಎಂಬುದೂ ಗೊತ್ತಾಗುತ್ತಿಲ್ಲ.

ಈ ಹಿಂದೆ 'ಹನಿ.. ಹನಿ' ಟಾಸ್ಕ್‌ನಲ್ಲಿ ತನಿಷಾ ಕುಪ್ಪಂಡ ಅವರು ಗಾಯ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಎರಡು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ದೊಡ್ಮನೆಗೆ ಮರಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT