ನಟಿ ಲೀಲಾವತಿ ತಮ್ಮ ಸೊಸೆ ವಿನೋದ್ ರಾಜ್ ಪತ್ನಿ ಅನು ಮತ್ತು ಮೊಮ್ಮಗ ಯುವರಾಜ್ ಜೊತೆ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಲೀಲಮ್ಮನಂಥ ಅತ್ತೆ ಪಡೆಯುವುದಕ್ಕೆ ನಾನು ಮತ್ತು ಅವರಂಥ ಅಜ್ಜಿ ಪಡೆಯುವುದಕ್ಕೂ ನನ್ನ ಮಗ ಪುಣ್ಯ ಮಾಡಿದ್ದೇವೆ: ವಿನೋದ್ ರಾಜ್ ಪತ್ನಿ ಮಾತು

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರು ಬಾರದ ಲೋಕಕ್ಕೆ ಪಯಣ ಬೆಳೆಸಿ ಇಂದು ಭಾನುವಾರಕ್ಕೆ ಮೂರು ದಿನ ಕಳೆದಿದೆ. ಅಂತಿಮ ಕ್ರಿಯೆ ಕಾರ್ಯದಲ್ಲಿ ಅವರ ಪುತ್ರ ವಿನೋದ್ ರಾಜ್ ಪತ್ನಿ ವಿನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರು ಬಾರದ ಲೋಕಕ್ಕೆ ಪಯಣ ಬೆಳೆಸಿ ಇಂದು ಭಾನುವಾರಕ್ಕೆ ಮೂರು ದಿನ ಕಳೆದಿದೆ. ಅಂತಿಮ ಕ್ರಿಯೆ ಕಾರ್ಯದಲ್ಲಿ ಅವರ ಪುತ್ರ ವಿನೋದ್ ರಾಜ್ ಪತ್ನಿ ಅನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಲೀಲಾವತಿ ಅಮ್ಮನವರು ಎಷ್ಟು ದೊಡ್ಡ ಕಲಾವಿದೆ ಆದರೂ ಜೀವನದಲ್ಲಿ ಬಹಳ ಶಿಸ್ತುಬದ್ಧವಾಗಿದ್ದರು. ಅವರ ಗುಣಗಳನ್ನು ನಾನು ನನ್ನ ಮಗನಿಗೂ ಹೇಳಿಕೊಟ್ಟಿದ್ದೇನೆ. ಅತ್ತೆಯವರಿಂದಲೇ ಅಷ್ಟು ಉತ್ತಮ ಗುಣನಡತೆ, ಶಿಸ್ತುಬದ್ಧ ಜೀವನ, ಸಾಧನೆ ಸಾಧ್ಯವಾಯಿತು. ಅವರನ್ನು ನೋಡಿ ಜೀವನದಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ. ಅವರಂಥ ಅತ್ತೆ ಪಡೆಯುವುದಕ್ಕೂ ನಾನು ಮತ್ತು ಅವರಂಥ ಅಜ್ಜಿ ಪಡೆಯುವುದಕ್ಕೂ ನನ್ನ ಮಗ ಪುಣ್ಯ ಮಾಡಿದ್ದೇವೆ ಎಂದರು.

ಲೀಲಾವತಿ ಅಮ್ಮನವರು ತೋಟಗಾರಿಕೆ, ಇತರ ಕೆಲಸಗಳಲ್ಲಿ ಬಹಳ ಶಿಸ್ತುಬದ್ಧವಾಗಿ ಇರುತ್ತಿದ್ದರು. ಅವರಂತೆ ಬದುಕಲು, ಸಾಧನೆ ಮಾಡಲು ನಮ್ಮಿಂದ ಸಾಧ್ಯವಿಲ್ಲ, ಆದರೂ ನಮ್ಮಿಂದಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಅವರು ನಟಿಸಿದ ಚಿತ್ರಗಳೆಲ್ಲ ನನಗೆ ಇಷ್ಟ. ಅವರ ಸಾಮಾಜಿಕ ಕಾರ್ಯ ಮಾದರಿ. ಜೀವನವೇ ಬೇರೆಯವರಿಗೆ ಮೀಸಲಿಟ್ಟರು ಎಂದರು.

ತಾಯಿ ಕಳೆದುಕೊಂಡ ವಿನೋದ್ ರಾಜ್ ಅವರು ತುಂಬ ದುಃಖದಲ್ಲಿದ್ದಾರೆ. ತಾಯಿ ಪ್ರೀತಿಯನ್ನು ಯಾರೂ ನೀಡಲು ಸಾಧ್ಯವಿಲ್ಲ, ಆದಷ್ಟು ಪ್ರೀತಿ ವಿಶ್ವಾಸ ತೋರಿಸಿ ವಿನೋದ್ ಅವರು ಖುಷಿಯಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಲೀಲಾವತಿ ಅವರ ಚೆನ್ನೈಯಲ್ಲಿ ವಾಸಿಸುತ್ತಿರುವ ಸೊಸೆ ವಿನು ಹೇಳಿದರು. 

ಇನ್ನು ವಿನೋದ್ ರಾಜ್ ಪುತ್ರ ಯುವರಾಜ್, ಮಧ್ಯಮ ವರ್ಗದ ಕುಟುಂಬದಿಂದ ಬಂದು ಇಷ್ಟು ದೊಡ್ಡ ಸಾಧನೆ ಮಾಡಿದ ನಮ್ಮ ಅಜ್ಜಿಯವರು ಸಮಾಜಕ್ಕೆ ಒಂದು ಸ್ಫೂರ್ತಿ ಎಂದರು.

ಲೀಲಾವತಿಯವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿನೋದ್‌ ರಾಜ್‌ ಅವರ ಪತ್ನಿ ಅನು ಮತ್ತು ಮಗ ಯುವರಾಜ್‌ ಸಹ ಚೆನ್ನೈನಿಂದ ಆಗಮಿಸಿ ಲೀಲಾವತಿಯವರ ಅಂತಿಮ ದರ್ಶನ ಪಡೆದಿದ್ದಾರೆ. ವಿನೋದ್‌ ರಾಜ್‌ ಅವರ ಪುತ್ರ ಯುವರಾಜ್‌, ಚೆನ್ನೈನಲ್ಲಿಯೇ ಅಮ್ಮನ ಜತೆಗೆ ಬೆಳೆಯುತ್ತಿದ್ದಾನೆ. ಸದ್ಯ ಎಂಜಿನಿಯರಿಂಗ್ ಮುಗಿಸಿ ಚೆನ್ನೈಯಲ್ಲಿ ಉದ್ಯೋಗ ಮಾಡುತ್ತಿದ್ದಾನೆ. ಆಗಾಗ ಅಮ್ಮನ ಜತೆಗೆ ಅಪ್ಪ ವಿನೋದ್‌ ರಾಜ್‌ ಮನೆಗೆ ಬಂದು ಹೋಗುತ್ತಿದ್ದನು. 

ಲೀಲಾವತಿಯವರ ಆರೋಗ್ಯ ಹದಗೆಟ್ಟ ಬಳಿಕವೂ ಅಜ್ಜಿಯನ್ನು ನೋಡಲು ತಾಯಿ ಅನು ಜತೆ ಯುವರಾಜ್‌ ಆಗಾಗ ಆಗಮಿಸುತ್ತಿದ್ದನು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT