ನಟ ನಿರೂಪ್ ಭಂಡಾರಿ ಮತ್ತು ತಂಡ 
ಸಿನಿಮಾ ಸುದ್ದಿ

ಸಚಿನ್ ವಾಲಿ ನಿರ್ದೇಶನದ ಇನ್ನೂ ಹೆಸರಿಡದ ಫ್ಯಾಮಿಲಿ ಎಂಟರ್‌ಟೈನರ್‌ನಲ್ಲಿ ನಿರೂಪ್ ಭಂಡಾರಿ ನಟನೆ

ರಂಗಿತರಂಗ ಚಿತ್ರದ ಮೂಲಕ ನಟನೆಯನ್ನು ಆರಂಭಿಸಿದ ನಟ ನಿರೂಪ್ ಭಂಡಾರಿ ಇದೀಗ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ನಿಭಾಯಿಸುತ್ತಿರುವ ಸಚಿನ್ ವಾಲಿ ಅವರ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ.

ನಟ ನಿರೂಪ್ ಭಂಡಾರಿ ಅವರು ತಮ್ಮ ಸಹೋದರ ಮತ್ತು ನಿರ್ದೇಶಕ ಅನುಪ್ ಭಂಡಾರಿ ಅವರೊಂದಿಗೆ ರಂಗಿತರಂಗ ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಜೀವನವನ್ನು ಆರಂಭಿಸಿದರು. ನಂತರ ರಾಜರಥ, ವಿಕ್ರಾಂತ್ ರೋಣ, ಆದಿ ಲಕ್ಷ್ಮಿ ಪುರಾಣ ಮತ್ತು ವಿಂಡೋ ಸೀಟ್‌ನಂತಹ ಚಿತ್ರಗಳಲ್ಲಿ ನಟಿಸಿದರು. ಇದೀಗ ನಟ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ನಿಭಾಯಿಸುತ್ತಿರುವ ಸಚಿನ್ ವಾಲಿ ಅವರ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ.

ಚಿತ್ರತಂಡ ಇತ್ತೀಚೆಗಷ್ಟೇ ಸ್ಕ್ರಿಪ್ಟ್ ಪೂಜೆಯೊಂದಿಗೆ ಯೋಜನೆಯನ್ನು ಪ್ರಾರಂಭಿಸಿದೆ. ಚಿತ್ರದ ಕುರಿತು ಕೆಲವು ಮಾಹಿತಿಗಳನ್ನು ಹಂಚಿಕೊಳ್ಳುವ ಸಚಿನ್, 'ನಾವು ಕುಟುಂಬ ಆಧಾರಿತ ಕಮರ್ಷಿಯಲ್ ಎಂಟರ್‌ಟೈನರ್ ಅನ್ನು ತರುತ್ತಿದ್ದೇವೆ. ಚಿತ್ರವು ಸತ್ಯ ಮತ್ತು ಸುಳ್ಳಿನ ಸಂಕೀರ್ಣತೆಗಳನ್ನು ಪರಿಶೀಲಿಸುತ್ತದೆ. ಇದೊಂದು ಸಾಮಾಜಿಕ ಸಮಸ್ಯೆಯ ಸುತ್ತ ಸುತ್ತುವ ಕಾಮಿಡಿ ಮತ್ತು ಆ್ಯಕ್ಷನ್ ಮಿಶ್ರಣದ ಚಿತ್ರವಾಗಿದೆ. ನಾವು 2024ರ ಜನವರಿಯಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿದ್ದೇವೆ' ಎನ್ನುತ್ತಾರೆ.

ನಾಯಕನಾಗಿ ನಿರೂಪ್ ಅವರನ್ನು ಅಂತಿಮಗೊಳಿಸಲಾಗಿದ್ದು, ಸದ್ಯಕ್ಕೆ ಚಿತ್ರತಂಡ ಉಳಿದ ತಾರಾಗಣವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದೆ. ಅಂಕೆಟ್ ಸಿನಿಮಾಸ್‌ ಅಡಿಯಲ್ಲಿ ಅಂಕಿತ್ ಸೋನಿಗಾರ ನಿರ್ಮಿಸಿರುವ ಈ ಚಿತ್ರಕ್ಕೆ ಪ್ರಶಾಂತ್ ಮುಳಗೆ ಸಹ ನಿರ್ಮಾಪಕರಾಗಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಅವರ ಸಂಗೀತ, ಉಲ್ಲಾಸ್ ಹೈದೂರ್ ಅವರ ಕಲಾ ನಿರ್ದೇಶನ ಮತ್ತು ಸಂದೀಪ್ ವಲ್ಲೂರಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT