ನಟ ಪೃಥ್ವಿರಾಜ್ ಸುಕುಮಾರನ್ 
ಸಿನಿಮಾ ಸುದ್ದಿ

Salaar: ಕನ್ನಡ ಸೇರಿ ಐದು ಭಾಷೆಗಳಲ್ಲೂ ಮಾಡಿದ ಪೃಥ್ವಿರಾಜ್ ಸುಕುಮಾರನ್ ಸ್ವತಃ ಡಬ್ಬಿಂಗ್‌!

ನಟ ಪ್ರಭಾಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಲಾರ್ ಚಿತ್ರವು ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಡಿಸೆಂಬರ್ 22 ರಂದು ಬಿಡುಗಡೆಗೆ ಸಜ್ಜಾಗಿದೆ. ಈ ಬೆನ್ನಲ್ಲೇ ವರದ ಪಾತ್ರದಲ್ಲಿ ನಟಿಸಿರುವ ಪೃಥ್ವಿರಾಜ್ ಸುಕುಮಾರನ್ ತಮ್ಮ ಪಾತ್ರಕ್ಕಾಗಿ ಎಲ್ಲಾ ಐದೂ ಭಾಷೆಗಳಲ್ಲಿ ತಾವೇ ಧ್ವನಿ ನೀಡಿದ್ದಾರೆ.

ನಟ ಪ್ರಭಾಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಲಾರ್ ಚಿತ್ರವು ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಡಿಸೆಂಬರ್ 22 ರಂದು ಬಿಡುಗಡೆಗೆ ಸಜ್ಜಾಗಿದೆ. ಈ ಬೆನ್ನಲ್ಲೇ ವರದ ಪಾತ್ರದಲ್ಲಿ ನಟಿಸಿರುವ ಪೃಥ್ವಿರಾಜ್ ಸುಕುಮಾರನ್ ತಮ್ಮ ಪಾತ್ರಕ್ಕಾಗಿ ಎಲ್ಲಾ ಐದೂ ಭಾಷೆಗಳಲ್ಲಿ ತಾವೇ ಧ್ವನಿ ನೀಡಿದ್ದಾರೆ.

ಚಿತ್ರದ ಅಂತಿಮ ಡಬ್ಬಿಂಗ್ ಕಾರ್ಯ ಮುಕ್ತಾಯಗೊಂಡ ನಂತರ ನಟ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, 'ಸಲಾರ್ ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದಿದೆ. ಇಷ್ಟು ವರ್ಷಗಳಲ್ಲಿ ನಾನು ಕೆಲಸ ಮಾಡಿದ ಎಲ್ಲಾ ಭಾಷೆಗಳಲ್ಲಿಯೂ ನಾನೇ ಧ್ವನಿ ನೀಡುವ ಅವಕಾಶ ನನಗೆ ಸಿಕ್ಕಿದೆ. ಈಗಲೂ ನನ್ನ ಪಾತ್ರಕ್ಕೆ ಐದು ಭಾಷೆಗಳಲ್ಲಿ ನಾನೇ ಡಬ್ ಮಾಡಿದ್ದೇನೆ. ಆದರೆ, ಒಂದೇ ಚಿತ್ರದಲ್ಲಿ ಪಾತ್ರಕ್ಕೆ 5 ಭಾಷೆಗಳಲ್ಲಿ ಡಬ್ ಮಾಡಿರುವುದು ನನಗೆ ಹೊಸದು. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ತನ್ನ ಪಾತ್ರಕ್ಕೆ ತಾನೇ ಧ್ವನಿ ನೀಡಿದ್ದೇನೆ' ಎಂದು ಬರೆದುಕೊಂಡಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲಂಸ್ ನಿರ್ಮಾಣದ ಈ ಚಿತ್ರದಲ್ಲಿ ಶ್ರುತಿ ಹಾಸನ್, ಶ್ರೀಯಾ ರೆಡ್ಡಿ, ಜಗಪತಿ ಬಾಬು, ಮಧು ಗುರುಸ್ವಾಮಿ, ರಾಮಚಂದ್ರ ರಾಜು, ಗರುಡ ರಾಮ್ ಮತ್ತು ತಿನ್ನು ಆನಂದ್ ಸೇರಿದಂತೆ ಇತರರು ನಟಿಸಿದ್ದಾರೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಅವರ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಮತ್ತು ಶಿವಕುಮಾರ್ ಮತ್ತು ಟಿಎಲ್ ವೆಂಕಟಾಚಲಪತಿ ಅವರ ನಿರ್ಮಾಣ ವಿನ್ಯಾಸವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಮುಂಬೈ ಮೇಯರ್ ಹಿಂದೂ-ಮರಾಠಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

SCROLL FOR NEXT