ಬ್ಯಾಕ್ ಬೆಂಚರ್ಸ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಮನರಂಜನೆಯ ರಸದೌತಣ ನೀಡಲು ಬರುತ್ತಿದೆ ಬ್ಯಾಕ್ ಬೆಂಚರ್ಸ್; ಮೊದಲ ಹಾಡು ಬಿಡುಗಡೆ

ಬಿಆರ್ ರಾಜಶೇಖರ್ ನಿರ್ದೇಶನದ ಬ್ಯಾಕ್ ಬೆಂಚರ್ಸ್ ಸಿನಿಮಾ, ಕಾಮಿಡಿ ಎಂಟರ್‌ಟೈನರ್ ಆಗಿದ್ದು, ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ಇದನ್ನು ವಿಜಯ್ ಪ್ರಕಾಶ್ ಹಾಡಿದ್ದು, ಸಂಗೀತ ನಿರ್ದೇಶಕ ನಕುಲ್ ಅಭಯಂಕರ್ ಸಂಯೋಜಿಸಿದ್ದಾರೆ. 

ಬಿಆರ್ ರಾಜಶೇಖರ್ ನಿರ್ದೇಶನದ ಬ್ಯಾಕ್ ಬೆಂಚರ್ಸ್ ಸಿನಿಮಾ, ಕಾಮಿಡಿ ಎಂಟರ್‌ಟೈನರ್ ಆಗಿದ್ದು, ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ಇದನ್ನು ವಿಜಯ್ ಪ್ರಕಾಶ್ ಹಾಡಿದ್ದು, ಸಂಗೀತ ನಿರ್ದೇಶಕ ನಕುಲ್ ಅಭಯಂಕರ್ ಸಂಯೋಜಿಸಿದ್ದಾರೆ. ಡಿಜಿಟಲ್ ಬಿಡುಗಡೆಯನ್ನು ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಮಾಡಿದ್ದಾರೆ.

ಈ ಚಿತ್ರ ತಯಾರಿಕೆಯ ಹಿಂದಿನ ಪ್ರಯಾಣದ ಬಗ್ಗೆ ಮಾತನಾಡುವ ರಾಜಶೇಖರ್, 'ಬ್ಯಾಕ್ ಬೆಂಚರ್ಸ್‌ ಸಿನಿಮಾ ಮನರಂಜನೆಯನ್ನು ಒದಗಿಸುವುದರ ಮೇಲೆ ಪ್ರಾಥಮಿಕ ಗಮನವನ್ನು ನೀಡಲಾಗಿದೆ. ಕಾಲೇಜು ದಿನಗಳಿಗೆ ಸಂಬಂಧಿಸಿದ ಕಚಗುಳಿಯಿಡುವ ಭಾವನೆಯನ್ನು ಹುಟ್ಟುಹಾಕುವುದು ಗುರಿಯಾಗಿದೆ. ಚಲನಚಿತ್ರವು ಶುದ್ಧ ಮನರಂಜನೆಯನ್ನು ನೀಡುತ್ತದೆ' ಎನ್ನುತ್ತಾರೆ.

ಚಿತ್ರದ ನಿರ್ಮಾಪಕರಾಗಿಯೂ ಜವಾಬ್ದಾರಿ ವಹಿಸಿರುವ ರಾಜಶೇಖರ್, ಬ್ಯಾಕ್ ಬೆಂಚರ್ಸ್ ಚಿತ್ರೀಕರಣವನ್ನು 30 ದಿನಗಳಲ್ಲಿ ಪೂರ್ಣಗೊಳಿಸಿದ್ದಾರೆ. ಹಲವಾರು ಉದಯೋನ್ಮುಖ ಪ್ರತಿಭೆಗಳನ್ನು ಒಳಗೊಂಡಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. 'ಸಂಗೀತ ನಿರ್ದೇಶಕ ಮತ್ತು ಛಾಯಾಗ್ರಾಹಕ ಮನೋಹರ್ ಜೋಶಿ ಅವರ ಸೃಜನಶೀಲ ಕೊಡುಗೆಗಳಿಗೆ ನಾನು ತುಂಬಾ ಋಣಿಯಾಗಿದ್ದೇನೆ' ಎಂದು ಅವರು ಹೇಳಿದರು.

ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು, ಸಂಗೀತ ಪ್ರೇಕ್ಷಕರ ಮನಸೂರೆಗೊಳ್ಳಲಿದೆ ಎಂಬ ವಿಶ್ವಾಸವನ್ನು ನಿರ್ದೇಶಕರು ಹೊರಹಾಕಿದ್ದಾರೆ.

ಪಿಪಿ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅರವಿಂದ್ ಕುಪ್ಲಿಕರ್, ರಂಜನ್ ನರಸಿಂಹ ಮೂರ್ತಿ, ಜತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಗ್, ಮಾನ್ಯ ಗೌಡ, ಕುಂಕುಮ್, ಅನುಷಾ ಸುರೇಶ್, ಮನೋಜ್ ಶೆಟ್ಟಿ, ನಮಿತಾ ಗೌಡ ಸೇರಿದಂತೆ ಹಲವರು ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT