ಮೂರನೇ ಕೃಷ್ಣಪ್ಪ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ನವೀನ್ ರೆಡ್ಡಿ ನಿರ್ದೇಶನದ, ರಂಗಾಯಣ ರಘು ಅಭಿನಯದ 'ಮೂರನೇ ಕೃಷ್ಣಪ್ಪ' ಚಿತ್ರ ಬಿಡುಗಡೆಗೆ ಸಿದ್ಧತೆ

ಅಕಿರ ಮತ್ತು Relax ಸತ್ಯ ಚಿತ್ರಗಳ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ನವೀನ್ ರೆಡ್ಡಿ ಅವರು ತಮ್ಮ ಮೂರನೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಮೂರನೇ ಕೃಷ್ಣಪ್ಪ ಎಂಬ ಶೀರ್ಷಿಕೆಯಡಿ ರಂಗಾಯಣ ರಘು ಮತ್ತು ಸಂಪತ್ ಮೈತ್ರೇಯ ನಾಯಕರಾಗಿ ಮತ್ತು ಶ್ರೀಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ.

ಅಕಿರ ಮತ್ತು Relax ಸತ್ಯ ಚಿತ್ರಗಳ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ನವೀನ್ ರೆಡ್ಡಿ ಅವರು ತಮ್ಮ ಮೂರನೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಮೂರನೇ ಕೃಷ್ಣಪ್ಪ ಎಂಬ ಶೀರ್ಷಿಕೆಯಡಿ ರಂಗಾಯಣ ರಘು ಮತ್ತು ಸಂಪತ್ ಮೈತ್ರೇಯ ನಾಯಕರಾಗಿ ಮತ್ತು ಶ್ರೀಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ.

ಸದ್ಯ ಪೋಸ್ಟ್ ಪ್ರೊಡಕ್ಷನ್‌ ಹಂತದಲ್ಲಿರುವ ಮೂರನೇ ಕೃಷ್ಣಪ್ಪ ಆನೇಕಲ್‌ನ ಸಾಂಸ್ಕೃತಿಕ ಸಾರವನ್ನು ಪ್ರತಿಬಿಂಬಿಸುವ ಹಳ್ಳಿಯ ದೇವಸ್ಥಾನದ ಉದ್ಘಾಟನೆಯನ್ನು ಕೇಂದ್ರೀಕರಿಸಿದ ಹಾಸ್ಯಮಯ ಕಥೆ ಎಂದು ಬಿಂಬಿಸಲಾಗಿದೆ. ಚಿತ್ರದಲ್ಲಿ ಉಗ್ರಂ ಮಂಜು ಮತ್ತು ತುಕಾಲಿ ಸಂತು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮೋಹನ್ ರೆಡ್ಡಿ ಮತ್ತು ರವಿಶಂಕರ್ ಅವರ ರೆಡ್ ಡ್ರ್ಯಾಗನ್ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರಕ್ಕೆ ಆನಂದ್ ರಾಜವಿಕ್ರಮ್ ಮತ್ತು ಸುಪ್ರಿತ್ ಶರ್ಮಾ ಅವರ ಸಂಗೀತ ಮತ್ತು ಯೋಗಿ ಅವರ ಛಾಯಾಗ್ರಹಣವಿದೆ. ಫೆಬ್ರುವರಿಯಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ತಂಡ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT