ಕಾಟೇರಾ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಟ್ರೈಲರ್ ರಿಲೀಸ್ ಗೆ ದಿನಾಂಕ ಫಿಕ್ಸ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ಇದರ ಬೆನ್ನಲ್ಲೇ ಚಿತ್ರತಂಡ ಅಭಿಮಾನಿಗಳಿಗೆ ಸಕತ್ ಸಿಹಿ ಸುದ್ದಿ ನೀಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಡಿಸೆಂಬರ್ 13 ರಂದು 'ಕಾಟೇರ' ಬಗ್ಗೆ ಅಪ್‌ಡೇಟ್ ಹಂಚಿಕೊಳ್ಳುವುದಾಗಿ ನಿರ್ದೇಶಕ ತರುಣ್ ಸುಧೀರ್ ಮಾಹಿತಿ ನೀಡಿದ್ದರು. ಇದು ಹಲವು ಗೊಂದಲಕ್ಕೆ ಕಾರಣವಾಗಿತ್ತು. ಡಿಸೆಂಬರ್ 16 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಚಿತ್ರತಂಡ ಈಗಾಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಮೆಚ್ಚುಗೆ ಪಡೆದಿದೆ. ಕಾಟೇರ ಸಿನಿಮಾದ ಎರಡು ಹಾಡು ರಿಲೀಸ್ ಆಗಿವೆ. ಎರಡೂ ಹಾಡಲ್ಲಿ ಆರಾಧನಾ ಹಾಗೂ ದರ್ಶನ್ ಪ್ರೀತಿಯ ಕಥೆಯ ಚಿತ್ರಣ ಇದೆ. ಆದರೆ ಸಿನಿಮಾದ ಮೊದಲ ಮೇಕಿಂಗ್ ವಿಡಿಯೋ ಮಾತ್ರ ಸಾಕಷ್ಟು ವಿಷಯದ ಮೇಲೆ ಬೆಳಕು ಚೆಲ್ಲಿದೆ. ಚಿತ್ರದ ಪ್ರತಿ ವಿಷಯದ ಝಲಕ್ ಅನ್ನ ಇಲ್ಲಿ ಕೊಟ್ಟಿದೆ ಅಂತಲೇ ಹೇಳಬಹುದು.

ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ವಾರ ಟ್ರೇಲರ್ ಬಿಡುಗಡೆ ಮಾಡುತ್ತಾರೆ ಎಂದು ಅಭಿಮಾನಿಗಳು ನಂಬಿದ್ದರು. ಹಾಗೇಯೇ ಡಿಸೆಂಬರ್ 16 ರಂದು ಕಾಟೇರ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ನಟ ದರ್ಶನ್ ತೂಗುದೀಪ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 29 ರಂದು ಬಿಡುಗಡೆಗೆ  ದಿನಾಂಕ ನಿಗದಿಪಡಿಸಲಾಗಿದೆ,  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ತರುಣ್ ಸುಧೀರ್, ರಾಬರ್ಟ್ ನಂತರದ ಮತ್ತೊಮ್ಮೆ ಕಾಟೇರಾ ಸಿನಿಮಾಗಾಗಿ ಒಂದುಗೂಡಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಡೈರೆಕ್ಟರ್ ತರುಣ್ ಸುಧೀರ್ ತಮ್ಮ ಈ ಚಿತ್ರದಲ್ಲಿ ಒಳ್ಳೆ ಪಾತ್ರಗಳನ್ನೆ ಕ್ರಿಯೇಟ್ ಮಾಡಿದ್ದಾರೆ. ಶೃತಿ, ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT