ಕಾಟೇರಾ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಟ್ರೈಲರ್ ರಿಲೀಸ್ ಗೆ ದಿನಾಂಕ ಫಿಕ್ಸ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ಇದರ ಬೆನ್ನಲ್ಲೇ ಚಿತ್ರತಂಡ ಅಭಿಮಾನಿಗಳಿಗೆ ಸಕತ್ ಸಿಹಿ ಸುದ್ದಿ ನೀಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಡಿಸೆಂಬರ್ 13 ರಂದು 'ಕಾಟೇರ' ಬಗ್ಗೆ ಅಪ್‌ಡೇಟ್ ಹಂಚಿಕೊಳ್ಳುವುದಾಗಿ ನಿರ್ದೇಶಕ ತರುಣ್ ಸುಧೀರ್ ಮಾಹಿತಿ ನೀಡಿದ್ದರು. ಇದು ಹಲವು ಗೊಂದಲಕ್ಕೆ ಕಾರಣವಾಗಿತ್ತು. ಡಿಸೆಂಬರ್ 16 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಚಿತ್ರತಂಡ ಈಗಾಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಮೆಚ್ಚುಗೆ ಪಡೆದಿದೆ. ಕಾಟೇರ ಸಿನಿಮಾದ ಎರಡು ಹಾಡು ರಿಲೀಸ್ ಆಗಿವೆ. ಎರಡೂ ಹಾಡಲ್ಲಿ ಆರಾಧನಾ ಹಾಗೂ ದರ್ಶನ್ ಪ್ರೀತಿಯ ಕಥೆಯ ಚಿತ್ರಣ ಇದೆ. ಆದರೆ ಸಿನಿಮಾದ ಮೊದಲ ಮೇಕಿಂಗ್ ವಿಡಿಯೋ ಮಾತ್ರ ಸಾಕಷ್ಟು ವಿಷಯದ ಮೇಲೆ ಬೆಳಕು ಚೆಲ್ಲಿದೆ. ಚಿತ್ರದ ಪ್ರತಿ ವಿಷಯದ ಝಲಕ್ ಅನ್ನ ಇಲ್ಲಿ ಕೊಟ್ಟಿದೆ ಅಂತಲೇ ಹೇಳಬಹುದು.

ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ವಾರ ಟ್ರೇಲರ್ ಬಿಡುಗಡೆ ಮಾಡುತ್ತಾರೆ ಎಂದು ಅಭಿಮಾನಿಗಳು ನಂಬಿದ್ದರು. ಹಾಗೇಯೇ ಡಿಸೆಂಬರ್ 16 ರಂದು ಕಾಟೇರ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ನಟ ದರ್ಶನ್ ತೂಗುದೀಪ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 29 ರಂದು ಬಿಡುಗಡೆಗೆ  ದಿನಾಂಕ ನಿಗದಿಪಡಿಸಲಾಗಿದೆ,  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ತರುಣ್ ಸುಧೀರ್, ರಾಬರ್ಟ್ ನಂತರದ ಮತ್ತೊಮ್ಮೆ ಕಾಟೇರಾ ಸಿನಿಮಾಗಾಗಿ ಒಂದುಗೂಡಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಡೈರೆಕ್ಟರ್ ತರುಣ್ ಸುಧೀರ್ ತಮ್ಮ ಈ ಚಿತ್ರದಲ್ಲಿ ಒಳ್ಳೆ ಪಾತ್ರಗಳನ್ನೆ ಕ್ರಿಯೇಟ್ ಮಾಡಿದ್ದಾರೆ. ಶೃತಿ, ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!