ಪರಾಕ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಶ್ರೀಮುರಳಿ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್‌: 'ಪರಾಕ್' ಟೈಟಲ್ ಪೋಸ್ಟರ್ ರಿಲೀಸ್

ರೋರಿಂಗ್‌ ಸ್ಟಾರ್‌ ಶ್ರೀಮುರಳಿಗೆ  ಜನ್ಮದಿನದ ಸಂಭ್ರಮ. ಜನ್ಮದಿನದ ಅಂಗವಾಗಿ ಈಗಾಗಲೇ ಬಘೀರ ಟೀಸರ್‌ ಬಿಡುಗಡೆ ಆಗಿದ್ದು, ಮೆಚ್ಚುಗೆ ಪಡೆದಿದೆ. ಈ ನಡುವೆ ಇನ್ನೊಂದು ಹೊಸ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ರೋರಿಂಗ್‌ ಸ್ಟಾರ್‌ ಶ್ರೀಮುರಳಿಗೆ  ಜನ್ಮದಿನದ ಸಂಭ್ರಮ. ಜನ್ಮದಿನದ ಅಂಗವಾಗಿ ಈಗಾಗಲೇ ಬಘೀರ ಟೀಸರ್‌ ಬಿಡುಗಡೆ ಆಗಿದ್ದು, ಮೆಚ್ಚುಗೆ ಪಡೆದಿದೆ. ಈ ನಡುವೆ ಇನ್ನೊಂದು ಹೊಸ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಯುವ ಪ್ರತಿಭೆಗಳ ಜೊತೆ ಶ್ರೀಮುರಳಿ ಕೈ ಜೋಡಿಸಿದ್ದಾರೆ. ರೋರಿಂಗ್ ಸ್ಟಾರ್ ಬರ್ತ್‌ಡೇಗೆ ಸ್ಪೆಷಲ್ ಆಗಿ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಸಾರಥ್ಯದ ಚಿತ್ರಕ್ಕೆ ಪರಾಕ್ ಎಂಬ  ಟೈಟಲ್ ಇಡಲಾಗಿದೆ.

ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಕ್ರಿಯೇಟರ್ ಹಾಗೂ ಡೈರೆಕ್ಟರ್ ಆಗಿರುವ ಹಾಲೇಶ್‌ಗೆ, ಮಂಜುನಾಥ್ ಬರವಣಿಗೆಯಲ್ಲಿ ಸಾಥ್ ಕೊಟ್ಟಿದ್ದಾರೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಪರಾಕ್ ಸಿನಿಮಾವನ್ನು ಬ್ರ್ಯಾಂಡ್ ಕೋಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ನಡಿ ನಿರ್ಮಾಣ ಮಾಡಲಾಗುತ್ತಿದೆ. ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಬಹುತೇಕ ಬೆಣ್ಣೆ ನಗರಿ ದಾವಣಗೆರೆ ಪ್ರತಿಭೆಗಳೇ ಒಂದಾಗಿ ಮಾಡುತ್ತಿರುವ ಪರಾಕ್ ಚಿತ್ರದ ಟೈಟಲ್ ಪೋಸ್ಟರ್ ಆಕರ್ಷಕವಾಗಿದೆ. ಹೊಸ ಅವತಾರದಲ್ಲಿ ಶ್ರೀಮುರಳಿ ದರ್ಶನ ಕೊಟ್ಟಿದ್ದಾರೆ. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ ಪರಾಕ್ ಬಳಗ, ಮೇ ಅಥವಾ ಜೂನ್ ತಿಂಗಳಿನಿಂದ ಶೂಟಿಂಗ್ ಅಖಾಡಕ್ಕೆ ಧುಮುಕುವ ಯೋಜನೆ ಹಾಕಿಕೊಂಡಿದೆ.

ಹಾಲೇಶ್, ಶ್ರೀಮುರಳಿ

ಹೊಸಬರಾಗಿರುವ ಹಾಲೇಶ್ ಅವರ ಚಿಂತನೆಯನ್ನು ನಾನು ಪ್ರಶಂಸಿಸುತ್ತೇನೆ. ಅವರಲ್ಲಿ ಒಂದು ಕಿಡಿ ಇದೆ,  ಹೀಗಾಗಿ ಅವರು ಉತ್ತಮ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಶ್ರೀಮುರಳಿ ಹೇಳುತ್ತಾರೆ, ನಾನು ಯೋಜನೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ನಂತರ ನಾನು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT