ನಿರೂಪ್ ಭಂಡಾರಿ - ಅಂಕಿತಾ ಅಮರ್ - ಬೃಂದಾ ಆಚಾರ್ಯ 
ಸಿನಿಮಾ ಸುದ್ದಿ

ನಿರೂಪ್ ಭಂಡಾರಿ ನಟನೆಯ ಚಿತ್ರತಂಡಕ್ಕೆ ನಟಿ ಬೃಂದಾ ಆಚಾರ್ಯ, ಅಂಕಿತಾ ಅಮರ್ ಸೇರ್ಪಡೆ

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ಸದ್ಯ ಬ್ಯುಸಿಯಾಗಿರುವ ನಟ ನಿರೂಪ್ ಭಂಡಾರಿ ಅವರು ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರವನ್ನು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಸಚಿನ್ ವಾಲಿ ನಿರ್ದೇಶಿಸಲಿದ್ದಾರೆ. 

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ಸದ್ಯ ಬ್ಯುಸಿಯಾಗಿರುವ ನಟ ನಿರೂಪ್ ಭಂಡಾರಿ ಅವರು ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರವನ್ನು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಸಚಿನ್ ವಾಲಿ ನಿರ್ದೇಶಿಸಲಿದ್ದಾರೆ. ಚಿತ್ರದ ಎರಡು ಪ್ರಮುಖ ಪಾತ್ರಗಳಿಗಾಗಿ ಚಿತ್ರತಂಡ ನಟಿಯರಾದ ಬೃಂದಾ ಆಚಾರ್ಯ ಮತ್ತು ಅಂಕಿತಾ ಅಮರ್ ಅವರನ್ನು ಕರೆತಂದಿದೆ.

ಕೌಸಲ್ಯ ಸುಪ್ರಜಾ ರಾಮ ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿರುವ ನಟಿ ಬೃಂದಾ ಆಚಾರ್ಯ ಅವರು ನಿರೂಪ್ ಭಂಡಾರಿ ಅವರೊಂದಿಗೆ ಮೊದಲ ಬಾರಿಗೆ ತೆರೆಹಂಚಿಕೊಳ್ಳಲಿದ್ದಾರೆ. ಅವರು ಸೋಶಿಯಲ್ ಮೀಡಿಯಾ ಇನ್ಫ್ಲ್ಯುಯನ್ಸರ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಕಥೆಯ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆಗೆ, ಬೃಂದಾ ಆಚಾರ್ಯ ಅವರು ದೀಕ್ಷಿತ್ ಶೆಟ್ಟಿ ನಟಿಸುತ್ತಿರುವ 'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ' ಎಂಬ ಇನ್ನೊಂದು ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ನಿರೂಪ್ ಭಂಡಾರಿ - ಬೃಂದಾ ಆಚಾರ್ಯ - ಅಂಕಿತಾ ಅಮರ್

ಇಬ್ಬನಿ ತಬ್ಬಿದ ಇಳೆಯಲಿ ಮತ್ತು ಜಸ್ಟ್ ಮ್ಯಾರೀಡ್ ಚಿತ್ರಗಳಲ್ಲಿ ನಟಿಸಿರುವ ಅಂಕಿತಾ ಅಮರ್ ಈ ಹೊಸ ಯೋಜನೆಯಲ್ಲಿ ಮಹತ್ವದ ಪಾತ್ರವನ್ನು ಗಿಟ್ಟಿಸಿಕೊಂಡಿದ್ದಾರೆ. ಅವರು ಚಿತ್ರದಲ್ಲಿ ವರದಿಗಾರ್ತಿಯಾಗಿ ನಟಿಸಿದ್ದಾರೆ ಮತ್ತು ನಿರೂಪ್ ಭಂಡಾರಿ ಅವರೊಂದಿಗೆ ಮೊದಲ ಬಾರಿಗೆ ನಟಿಸುತ್ತಿದ್ದಾರೆ.

ಸಚಿನ್ ವಾಲಿ ನಿರ್ದೇಶನದ ಈ ಚಿತ್ರವು ಹಾಸ್ಯ ಮತ್ತು ಆ್ಯಕ್ಷನ್ ಅನ್ನು ಒಳಗೊಂಡಿರಲಿದ್ದು, ಸಾಮಾಜಿಕ ಸಮಸ್ಯೆಯ ಸುತ್ತ ಸುತ್ತಲಿದೆ. ಈ ಚಿತ್ರವು ಸತ್ಯ ಮತ್ತು ಸುಳ್ಳಿನ ಸಂಕೀರ್ಣತೆಗಳನ್ನು ಪರಿಶೀಲಿಸುವ ಕೌಟುಂಬಿಕ ಆಧರಿತ ಕಮರ್ಷಿಯಲ್ ಎಂಟರ್‌ಟೈನರ್  ಆಗಿರುತ್ತದೆ.

ಅಂಕೆಟ್ ಸಿನಿಮಾಸ್‌ಗಾಗಿ ಅಂಕಿತ್ ಸೋನಿಗರ ಬೆಂಬಲದೊಂದಿಗೆ ಮತ್ತು ಪ್ರಶಾಂತ್ ಮುಳಗೆ ಸಹ-ನಿರ್ಮಾಣ ಚಿತ್ರಕ್ಕಿದ್ದು, ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಚಿತ್ರಕ್ಕೆ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಮತ್ತು ಸಂದೀಪ್ ವಲ್ಲೂರಿ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT