ಸಲಾರ್ ಚಿತ್ರದಲ್ಲಿ ನಟ ಪ್ರಭಾಸ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ಸಲಾರ್ ಆರ್ಭಟ; ಬಿಡುಗಡೆಯಾದ ಮೂರೇ ದಿನಕ್ಕೆ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್

ನಟ ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಚಿತ್ರ ಬಿಡುಗಡೆಯಾದ ಮೂರು ದಿನಗಳಲ್ಲಿ ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. 

ಮುಂಬೈ: ನಟ ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಚಿತ್ರ ಬಿಡುಗಡೆಯಾದ ಮೂರು ದಿನಗಳಲ್ಲಿ ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. 

ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಸಿದ್ದಾರೆ.

ಚಿತ್ರವು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಶುಕ್ರವಾರ (ಡಿಸೆಂಬರ್ 22) ಬಿಡುಗಡೆಯಾಗಿತ್ತು.
ಚಿತ್ರತಂಡ ಇತ್ತೀಚಿನ ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು 'ಸಲಾರ್'ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

'ಬಾಕ್ಸ್ ಆಫೀಸ್ ಕಾ ಸಲಾರ್. ಬ್ಲಾಕ್ ಬಸ್ಟರ್ ಸಲಾರ್ ಸಿನಿಮಾ ಬಿಡುಗಡೆಯಾದ 3 ದಿನಗಳಲ್ಲಿ ಜಾಗತಿಕವಾಗಿ 402 ಕೋಟಿ ರೂ.  ಸಂಗ್ರಹಿಸಿದೆ!' ಎಂದು ಬರೆಯಲಾಗಿದೆ.

ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಕಥೆಯನ್ನು ಹೊಂದಿರುವ 'ಸಲಾರ್: ಭಾಗ 1 - ಕದನ ವಿರಾಮ' ಇಬ್ಬರು ಗೆಳೆಯರಾದ ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಸುತ್ತ ಸುತ್ತುತ್ತದೆ.

ಹೊಂಬಾಳೆ ಫಿಲ್ಮ್ಸ್ ಪ್ರಕಾರ, ಸಿನಿಮಾ 2023 ರಲ್ಲಿ ತೆರೆಕಂಡ ಯಾವುದೇ ಸಿನಿಮಾಗಳು ಆರಂಭಿಕ ದಿನಗಳಲ್ಲಿ ಗಳಿಸದಷ್ಟು ಸಂಗ್ರಹವನ್ನು ಬಾಕ್ಸ್‌ ಆಫೀಸ್‌ನಲ್ಲಿ ಸಲಾರ್ ಮಾಡಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನವೇ 178. 7 ಕೋಟಿ ಗಳಿಸುವ ಮೂಲಕ ದಾಖಲೆ ನಿರ್ಮಿಸಿದೆ.

'ಸಲಾರ್: ಭಾಗ 1 - ಕದನ ವಿರಾಮ'ದಲ್ಲಿ ನಟಿ ಶ್ರುತಿ ಹಾಸನ್, ಈಶ್ವರಿ ರಾವ್, ಜಗಪತಿ ಬಾಬು ಮತ್ತು ಶ್ರೀಯಾ ರೆಡ್ಡಿ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT