ನಟ ವಿಜಯ್ ಮೇಲೆ ಚಪ್ಪಲಿ ಎಸೆತ 
ಸಿನಿಮಾ ಸುದ್ದಿ

ವಿಜಯ್ ಕಾಂತ್ ಅಂತ್ಯಸಂಸ್ಕಾರದ ವೇಳೆ ನಟ ವಿಜಯ್ ಮೇಲೆ ಚಪ್ಪಲಿ ಎಸೆತ, ವಿಡಿಯೋ ವೈರಲ್

ಇತ್ತೀಚೆಗೆ ಸಾವನ್ನಪ್ಪಿದ ನಟ ವಿಜಯ್ ಕಾಂತ್ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ನಟ ವಿಜಯ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ.

ಚೆನ್ನೈ: ಇತ್ತೀಚೆಗೆ ಸಾವನ್ನಪ್ಪಿದ ನಟ ವಿಜಯ್ ಕಾಂತ್ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ನಟ ವಿಜಯ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ.

ನಟ, ರಾಜಕಾರಣಿ ಮತ್ತು ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ್ ನಿಧನರಾದ ಬೆನ್ನಲ್ಲೇ ಡಿಎಂಡಿಕೆ ಮುಖ್ಯಸ್ಥರ ನಿವಾಸಕ್ಕೆ ಹಲವು ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ನಟ ದಳಪತಿ ವಿಜಯ್ ಕೂಡ ಕ್ಯಾಪ್ಟನ್‌ಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದರು. ಈ ವೇಳೆ ಕಿಡಿಗೇಡಿಯೊಬ್ಬ ಅವರ ಮೇಲೆ ಚಪ್ಪಲಿ ಎಸೆದಿದ್ದು, ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ವ್ಯಾಪಕ ವೈರಲ್ ಆಗಿದೆ.

ಹಿಂದಿರುಗುತ್ತಿದ್ದ ವೇಳೆ ಘಟನೆ
ಕ್ಯಾಪ್ಟನ್‌ ವಿಜಯಕಾಂತ್‌ ಅವರ ಅಂತಿಮ ದರ್ಶನ ಪಡೆಯಲು ನಟ ವಿಜಯ್‌ ಅವರು ಬಂದಿದ್ದರು. ಈ ವೇಳೆ ಭಾವುಕರಾದ ವಿಜಯ್ ಅವರು ವಿಜಯಕಾಂತ್ ಅವರ ಕುಟುಂಬದೊಂದಿಗೆ ಕೆಲ ಕ್ಷಣಗಳನ್ನು ಕಳೆದರು. ನಂತರ ಅಗಲಿದ ನಾಯಕನ ದರ್ಶನ ಪಡೆದರು. ದರ್ಶನ ಪಡೆದು ಮನೆಗೆ ಹಿಂತಿರುಗುತ್ತಿದ್ದ ವೇಲೆ ಮಾಧ್ಯಮದವರು ಅವರನ್ನು ಮಾತನಾಡಿಸಲು ಸುತ್ತುವರೆದರು, ಪೊಲೀಸರು ಮತ್ತು ಅವರ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕರೆದುಕೊಂಡು ಹೋಗಲು ಶತ ಪ್ರಯತ್ನಗಳನ್ನು ನಡೆಸಿದರು. ಈ ವೇಳೆ ಅವರ ಮೇಲೆ ಚಪ್ಪಲಿ ಎಸೆಯಲಾಯಿತು.

ಅಭಿಮಾನಿಗಳ ಆಕ್ರೋಶ
ಈ ಘಟನೆಯಿಂದ ವಿಜಯ್‌ ಅಭಿಮಾನಿಗಳು ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ವಿಜಯಕಾಂತ್ ಅವರ ಸಾವಿನ ನಡುವೆ ಈ ರೀತಿಯ ವರ್ತನೆ ಸರಿಯಲ್ಲ ಎಂದು ದಳಪತಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ ಅಲ್ಲದೆ, ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT