ರಾಯಲ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ದಿನಕರ್ ತೂಗುದೀಪ ನಿರ್ದೇಶನದ ವಿರಾಟ್ ಅಭಿನಯದ ಸಿನಿಮಾ ಟೈಟಲ್ 'ರಾಯಲ್'!

ನಿರ್ದೇಶಕ ದಿನಕರ್ ತೂಗುದೀಪ ಅವರ ಮುಂದಿನ ಸಿನಿಮಾದಲ್ಲಿ ವಿರಾಟ್ ಮತ್ತು ಸಂಜನಾ ಆನಂದ್ ನಟಿಸಿದ್ದಾರೆ.  ಜಯಣ್ಣ ಫಿಲ್ಮ್ಸ್  ನಿರ್ಮಾಣದ ಚಿತ್ರಕ್ಕೆ ರಾಯಲ್ ಎಂದು ಹೆಸರಿಡಲಾಗಿದೆ.

ನಿರ್ದೇಶಕ ದಿನಕರ್ ತೂಗುದೀಪ ಅವರ ಮುಂದಿನ ಸಿನಿಮಾದಲ್ಲಿ ವಿರಾಟ್ ಮತ್ತು ಸಂಜನಾ ಆನಂದ್ ನಟಿಸಿದ್ದಾರೆ.  ಜಯಣ್ಣ ಫಿಲ್ಮ್ಸ್ ನಿರ್ಮಾಣದ ಚಿತ್ರಕ್ಕೆ ರಾಯಲ್ ಎಂದು ಹೆಸರಿಡಲಾಗಿದೆ.

ನಿರ್ಮಾಪಕರಾದ ವಿಜಯ್ ಕಿರಗಂದೂರು ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಿನಿಮಾ ಟೈಟಲ್  ಬಿಡುಗಡೆ ಮಾಡಿದ್ದಾರೆ. ದಿನಕರ್‌ ನಿರ್ದೇಶನದ ಸಿನಿಮಾದ ಶೂಟಿಂಗ್ ಶೇ.80ರಷ್ಟು ಕಂಪ್ಲೀಟ್‌ ಮಾಡಿದ್ದಾರೆ.

ರಾಯಲ್‌ ಆಗಿ ಜೀವನ ಮಾಡಬೇಕು ಎಂಬುದು ಪ್ರತಿಯೊಬ್ಬರ ಕನಸು. ಅದರಂತೆ ಈ ಚಿತ್ರದ ನಾಯಕ ಹಾಗೆ ಜೀವನ ಮಾಡಬೇಕು ಎಂದು ಅಂದುಕೊಂಡಿರುತ್ತಾನೆ. ಇದೇ ಕಥೆಯಾಗಿದ್ದು, ಜನರಿಗೆ ಇಡೀ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್‌ ಸಿಗಲಿದೆ. ಎರಡೂವರೆ ಗಂಟೆ ನಮ್ಮನ್ನು ನಂಬಿ ಬಂದವರಿಗೆ ಮನರಂಜನೆ ನೀಡಲು ಈ ಚಿತ್ರ ಮಾಡುತ್ತಿದ್ದೇವೆ. ಈಗಾಗಲೇ ಪೋಸ್ಟರ್‌ ನೋಡಿದ ಹಲವರು ಇಷ್ಟಪಡುತ್ತಿದ್ದಾರೆ. ಸಿನಿಮಾವನ್ನು ಸಹ ಅವರೆಲ್ಲರೂ ಇಷ್ಟಪಡುವಂತೆ ಮಾಡುತ್ತಿದ್ದೇವೆ ಎಂಬ ನಂಬಿಕೆ ನನ್ನದು’ಎನ್ನುತ್ತಾರವರು.

"ನಾವು ಆಕರ್ಷಕ ಹೆಸರನ್ನು ಹುಡುಕುತ್ತಿದ್ದೆವು, ಪ್ರೇಕ್ಷಕರ ಮನಸ್ಸಿನಲ್ಲಿ ಸುಲಭವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ರಾಯಲ್ ನಮ್ಮ ಅಗತ್ಯಗಳಿಗೆ ಎಲ್ಲಾ ರೀತಿಯಲ್ಲಿ ಸರಿಹೊಂದುತ್ತದೆ. ಯೂತ್‌ಫುಲ್ ಕಮರ್ಷಿಯಲ್ ಎಂಟರ್‌ಟೈನರ್‌ನಲ್ಲಿ ಭಾವನೆಗಳು, ಹಾಸ್ಯ ಮತ್ತು ಆಕ್ಷನ್ ಕೂಡ ಇದೆ ಎಂದು ನಿರ್ದೇಶಕ ದಿನಕರ್ ತೂಗುದೀಪ್ ಹೇಳಿದ್ದಾರೆ.

ಉಳಿದ ಭಾಗದ ಶೂಟಿಂಗ್ ಏಪ್ರಿಲ್ ಒಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ನಾನು ಚಿತ್ರದ ಎಡಿಟಿಂಗ್ ಅನ್ನು ಪ್ರಾರಂಭಿಸಿದ್ದೇನೆ ಮತ್ತು ಏಪ್ರಿಲ್‌ನಲ್ಲಿ ಡಬ್ಬಿಂಗ್ ಪ್ರಾರಂಭಿಸುವ ಭರವಸೆ ಇದೆ. ಅದರ ನಂತರ ಉಳಿದ ಭಾಗಗಳನ್ನು ಪೂರ್ಣಗೊಳಿಸುತ್ತೇವೆ' ಎನ್ನುತ್ತಾರೆ ದಿನಕರ್.

ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಲವ್ ಮಾಕ್‌ಟೇಲ್ ಖ್ಯಾತಿಯ ಅಭಿಲಾಷ್ ಮತ್ತು ಯೂಟ್ಯೂಬರ್ ಗೌರೋವ್ ಶೆಟ್ಟಿ ಸಹ ನಟಿಸಿದ್ದಾರೆ. ರಾಯಲ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಸಂಕೇತ್ ಮೈಸ್ ಅವರ ಛಾಯಾಗ್ರಹಣವಿದೆ.

ರಾಯಲ್‌ ಒಂದು ಪಕ್ಕಾ ಕಮರ್ಷಿಯಲ್‌ ಜಾನರ್‌ನ ಸಿನಿಮಾ. ಇಲ್ಲಿ ಎಲ್ಲವೂ ಹದವಾಗಿ ಬೆರೆತಿದೆ. ವಿರಾಟ್‌ ಅವರು ತುಂಬ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಒಂದೊಳ್ಳೆ ತಂಡ ಒಳಗೊಂಡ ಈ ಸಿನಿಮಾವನ್ನು ಜನ ಮೆಚ್ಚುತ್ತಾರೆ" ಎಂದಿದ್ದಾರೆ ನಿರ್ದೇಶಕ ದಿನಕರ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT